ಉಡುಪಿ: ವೃದ್ಧ ದಂಪತಿ ಸಾವಿನಲ್ಲೂ ಒಂದಾದ ಘಟನೆ ಕುಂದಾಪುರದ ಸಾಸ್ತಾನ ಬಳಿಯ ಗುಂಡ್ಮಿಯಲ್ಲಿ ನಡೆದಿದೆ.
ನಿವೃತ್ತ ಹಿರಿಯ ಆರೋಗ್ಯ ನಿರೀಕ್ಷಕರಾದ ಜೆ. ರತ್ನಾಕರಾಯ (84) ಮತ್ತು ಅವರ ಪತ್ನಿ ಸರೋಜಮ್ಮ (72) ಸಾವಿನಲ್ಲೂ ಒಂದಾದ ದಂಪತಿ. ಸರೋಜಮ್ಮ ಗುರುವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದರು.
ಈ ವೇಳೆ ಪತ್ನಿಯ ಪಕ್ಕದಲ್ಲೇ ಇದ್ದ ರತ್ನಾಕರಾಯ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ತಕ್ಷಣ ಚಿಕಿತ್ಸೆ ನೀಡಲು ಪ್ರಯತ್ನಿಸಿದರೂ, ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ. ಪತ್ನಿ ಸಾವನ್ನಪ್ಪಿದ 4 ಗಂಟೆಗಳ ಬಳಿ ರತ್ನಾಕರಾಯ ನಿಧನರಾಗಿದ್ದಾರೆ. ಮೃತ ದಂಪತಿ ಒಬ್ಬ ಮಗ ಮತ್ತು ಮಗಳನ್ನು ಅಗಲಿದ್ದಾರೆ.












