ಜುಲೈ 15 ರಿಂದ ಆಗಸ್ಟ್ 15 ರವರೆಗೆ ಜಿಲ್ಲಾ ಕಾರ್ಮಿಕ ಅದಾಲತ್ ಕಾರ್ಯಕ್ರಮ

 

ಉಡುಪಿ: ಕಾರ್ಮಿಕ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿ ಕಾರ್ಮಿಕ ಕಾಯ್ದೆಗಳಡಿ ಹಾಗೂ ವಿವಿಧ
ಮಂಡಳಿಗಳ ಮೂಲಕ ಅನುಷ್ಠಾನಗೊಳಿಸುವ ಯೋಜನೆಗಳಡಿ ಸ್ವೀಕೃತವಾಗಿರುವ, ಇತ್ಯರ್ಥವಾಗದೆ ಬಾಕಿ ಉಳಿದಿರುವ ಪ್ರಕರಣ, ಕಡತ ಹಾಗೂ ವಿವಿಧ ಯೋಜನೆಗಳಡಿ ಬಾಕಿ ಇರುವ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡಲು ಜುಲೈ 15 ರಿಂದ ಆಗಸ್ಟ್ 15 ರ ವರೆಗೆ ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಕಛೇರಿ ಹಾಗೂ ಉಡುಪಿ, ಕುಂದಾಪುರ, ಕಾರ್ಕಳ ಕಾರ್ಮಿಕ ನಿರೀಕ್ಷಕರ ಕಛೇರಿಗಳಲ್ಲಿ ಕಾರ್ಮಿಕ ಅದಾಲತ್ ಕಾರ್ಯಕ್ರಮ ನಡೆಯಲಿದೆ.

ಜಿಲ್ಲೆಯ ಕಾರ್ಮಿಕರು, ಮಾಲೀಕರು ಹಾಗೂ ಕಾರ್ಮಿಕ ಸಂಘಟಕರು ಅಗತ್ಯ ದಾಖಲೆಗಳೊಂದಿಗೆ ಖುದ್ದಾಗಿ ಹಾಜರಾಗಿ ಬಾಕಿ ಇರುವ ಕಡತ, ಅರ್ಜಿ ಹಾಗೂ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡಿಕೊಳ್ಳುವಂತೆ ಜಿಲ್ಲಾ ಕಾರ್ಮಿಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.