ಕಾರ್ಕಳ: ಚಲಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು ಚಿರತೆ ಸಾವು

ಕಾರ್ಕಳ: ಕಾಡಿನ ಮಧ್ಯದಿಂದ ಹಠಾತ್ತನೆ ಚಿರತೆಯೊಂದು ರಸ್ತೆಗೆ ನುಗ್ಗಿ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆ ಪರಿಣಾಮ ಸಾವನಪ್ಪಿದೆ.

ಘಟನೆಯು ಹೆಬ್ರಿ ತಾಲೂಕಿನ ಮುದ್ರಾಡಿ ಕಾರ್ಕಳ ರಸ್ತೆಯ ಭಕ್ರೆ ಮಠ ಕ್ರಾಸ್ ಬಳಿ ಗುರುವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ.

ಕಾರ್ಕಳದಿಂದ ಮುದ್ರಾಡಿ ಕಡೆಗೆ ವೇಗವಾಗಿ ಸಂಚರಿಸುತ್ತಿದ್ದ ಕಾರು ರಸ್ತೆ ಕಡೆಗೆ ಹಠಾತ್ತಾಗಿ ನುಗ್ಗಿದ ಚಿರತೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಚಿರತೆ ಸ್ಥಳದಲ್ಲೇ ಸಾವನ್ನಪ್ಪಿದೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.

ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.