ಮಾನವ ಶ್ರಮ ಬಳಸಿ ಮರಳು ತೆರವುಗೊಳಿಸುವವರ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಉಡುಪಿ: ಜಿಲ್ಲೆಯಲ್ಲಿ ಈ ಹಿಂದೆ ಸಿ.ಆರ್.ಝಡ್ ಮತ್ತು ನಾನ್ ಸಿ.ಆರ್.ಝಡ್ ವ್ಯಾಪ್ತಿಯಲ್ಲಿ ಸಾಂಪ್ರದಾಯಿಕವಾಗಿ ಮಾನವ ಶ್ರಮ ಬಳಸಿ ಮರಳು ತೆರವುಗೊಳಿಸಿರುವವರ ಪಟ್ಟಿಯನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದ್ದು, ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಅರ್ಜಿ ಸಲ್ಲಿಸಲು ಆಗಸ್ಟ್ 18 ಕೊನೆಯ ದಿನವಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.