ಕಾರ್ಕಳ ಪುರಸಭೆ: ನಿರುದ್ಯೋಗಿ ಯುವಕ–ಯುವತಿಯರಿಗೆ ಸ್ವ ಉದ್ಯೋಗಕ್ಕಾಗಿ ಸಾಲ ಸೌಲಭ್ಯ

 

ಉಡುಪಿ: ಕಾರ್ಕಳ ಪುರಸಭೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೇಂದ್ರ ಪುರಸ್ಕೃತ ಯೋಜನೆಯಾದ ದೀನ
ದಯಾಳ್ ಅಂತ್ಯೋದಯ ಯೋಜನೆಯ-ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದಡಿ ಕಾರ್ಕಳ ಪುರಸಭಾ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಬಡತನ ರೇಖೆಗಿಂತ ಕೆಳಗಿರುವ ನಿರುದ್ಯೋಗಿ ಯುವಕ–ಯುವತಿಯರು ಸ್ವಯಂ-ಉದ್ಯೋಗ ಕೈಗೊಳ್ಳಲು ರಾಷ್ಟ್ರೀಕೃತ ಬ್ಯಾಂಕ್ ಮೂಲಕ ಕಡಿಮೆ ಬಡ್ಡಿದರದಲ್ಲಿ 2 ಲಕ್ಷ ರೂ. ವರೆಗೆ ಸಾಲ ಸೌಲಭ್ಯ ನೀಡಲಾಗುವುದು.

ಮಹಿಳಾ ಉಳಿತಾಯ ಗುಂಪುಗಳ ರಚನೆ, ಈಗಾಗಲೇ ರಚಿಸಲಾಗಿರುವ ಮಹಿಳಾ ಉಳಿತಾಯ ಗುಂಪುಗಳಿಗೆ ಬ್ಯಾಂಕ್ ಲಿಂಕೇಜ್, ಉಳಿತಾಯ ಗುಂಪುಗಳ ಮಹಿಳೆಯರಿಗೆ ಆಹಾರ ಉತ್ಪನ್ನ ಘಟಕಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಕೃತ ಬ್ಯಾಂಕ್ ಮೂಲಕ ಸಾಲ ಸೌಲಭ್ಯ ನೀಡಲಾಗುವುದು.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಪುರಸಭಾ ಕಚೇರಿಯನ್ನು ಸಂಪರ್ಕಿಸುವಂತೆ ಕಾರ್ಕಳ ಪುರಸಭೆ ಮುಖ್ಯಾಧಿಕಾರಿಗಳ ಪ್ರಕಟಣೆ ತಿಳಿಸಿದೆ.