ಏ.30 ರವರೆಗೆ ರಾಜ್ಯದಲ್ಲಿ ಲಾಕ್ ಡೌನ್ : ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ಲಾಕ್ ಡೌನ್ ಮುಂದುವರೆಯಲಿದೆಯೇ ಎನ್ನುವ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕೃತ ಮಾಹಿತಿ ನೀಡಿದ್ದು  ಲಾಕ್ ಎಪ್ಪಿಲ್ ತಿಂಗಳ ಅಂತ್ಯದವರೆಗೆ ಮುಂದುವರೆಯಲಿದೆ ಎಂದಿದ್ದಾರೆ.

ಶನಿವಾರ ಪ್ರಧಾನಿ ನರೇಂದ್ರ ಮೋದಿಯವರ ಜೊತೆ ವಿಡಿಯೋ ಸಂವಾದದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮಗಳಿಗೆ ಸಿ.ಎಂ ಮಾಹಿತಿ ನೀಡಿದ್ದಾರೆ. ಪ್ರಧಾನಿ ಅವರು ಆರ್ಥಿಕ ಚಟುವಟಿಕೆಗಳಿಗೆ ವಿನಾಯ್ತಿ ನೀಡಿ ಲಾಕ್ ಡೌನ್ ಮುಂದುವರೆಸುದಕ್ಕೆ ಆದೇಶ ನೀಡಿದ್ದಾರೆ.ಲಾಕ್ ಡೌನ್ ವಿಭಿನ್ನವಾಗಿರಲಿದೆ.ಈ ಕುರಿತು ಹೆಚ್ಚಿನ ಮಾಹಿತಿಯನ್ನು ಒಂದೆರಡು ದಿನದಲ್ಲಿ ನೀಡುತ್ತೇವೆ ಎಂದಿದ್ದಾರೆ.

ಈ ಕುರಿತು ಇನ್ನೂ ಹೆಚ್ಚಿನ ಮಾಹಿತಿಯನ್ನು ಪ್ರಧಾನಿ ಅವರು ಶನಿವಾರದ ತಮ್ಮ ಭಾಷಣದಲ್ಲಿ ನೀಡುವ ವಿಶ್ವಾಸವನ್ನು ಸಿಎಂ ವ್ಯಕ್ತಪಡಿಸಿದ್ದಾರೆ