ಉಡುಪಿ: ಗೇರು ಬೀಜ ತುಂಬಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ

ಉಡುಪಿ: ಗೇರುಬೀಜ ತುಂಬಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66 ಬಲಾಯಿಪಾದೆ ಜಂಕ್ಷನ್ ನಲ್ಲಿ ನಡೆದಿದೆ. ಮಂಗಳೂರಿನಿಂದ ಉಡುಪಿ ಕಡೆ ಹೋಗುತ್ತಿದ್ದ ಗೇರು ಬೀಜ ತುಂಬಿದ್ದ ಲಾರಿ ಬಲಾಯಿಪಾದೆ ಜಂಕ್ಷನ್ ನಲ್ಲಿ ಪಲ್ಟಿಯಾಗಿದೆ.

ಲಾರಿಯ ಚಾಲಕ ಮತ್ತು ಸಹಾಯಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.