ಮಾಜಿ ಕೇಂದ್ರ ಸಚಿವ ಧನಂಜಯ ಕುಮಾರ್ ನಿಧನ

ಮಾಜಿ ಕೇಂದ್ರ ಸಚಿವ ಧನಂಜಯ ಕುಮಾರ್ ಅವರು ಇಂದು ಮಂಗಳೂರಿನ ಯುನಿಟಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರು ಕಳೆದ ಕೆಲವು ಸಮಯಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು.
ನಾಳೆ ಬೆಳಗ್ಗೆ ‌7 ಗಂಟೆಯಿಂದ ‌10 ರವರೆಗೆ ನಗರದ ಕದ್ರಿ‌ಕಂಬಳದಲ್ಲಿ ಇರುವ ಅವರ ನಿವಾಸದಲ್ಲಿ ‌ಸಾರ್ವಜನಿಕರಿಗೆ‌ ಅಂತಿಮ ದರ್ಶನ. ಬಳಿಕ ಹುಟ್ಟೂರಾದ ವೇಣೂರಿಗೆ ಅವರ ಮೃತ ದೇಹವನ್ನು ಕೊಂಡೊಯ್ದು ಅಂತಿಮ ಸಂಸ್ಕಾರ ನೆರವೇರಿಸಲಾಗಿವುದು.
ಅವರು ಮಂಗಳೂರು ಲೋಕಸಭಾ ಕ್ಷೇತ್ರದಿಂದ ಮೊದಲ ಬಾರಿಗೆ ಬಿಜೆಪಿಯಿಂದ ಆಯ್ಕೆಯಾಗಿದ್ದರು. ವಾಜಪೇಯಿ ಸರ್ಕಾರದಲ್ಲಿ ಕೇಂದ್ರ ವಿಮಾನಯಾನ ಖಾತೆ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.
ಕೆಲಕಾಲ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು. ಯಡಿಯೂರಪ್ಪನವರು ಕೆಜೆಪಿ ಪಕ್ಷ ಸ್ಥಾಪನೆ ಮಾಡಿದಾಗ ಅವರೊಂದಿಗೆ ಬಿಜೆಪಿ ತೊರೆದು ಕೆಜೆಪಿ ಸೇರಿದ್ದರು. ಆದರೆ ಯಡಿಯೂರಪ್ಪ ಅವರು ಬಿಜೆಪಿ ಮತ್ತೆ ಸೇರಿದಾಗ ಧನಂಜಯ ಕುಮಾರ್ ಅವರು ಬಿಜೆಪಿ ಸೇರಲಿಲ್ಲ. ಬಳಿಕ ಜೆಡಿಎಸ್ ಸೇರಿದ ಅವರು,  ಕಳೆದ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಜೆಡಿಎಸ್ ನಿಂದ ಸ್ಪರ್ಧಿಸಿ ಸೋಲುಕಂಡಿದ್ದರು. ಆ ಬಳಿಕ ಅನಾರೋಗ್ಯದ ಕಾರಣದಿಂದ ರಾಜಕೀಯದಿಂದ ದೂರ ಸರಿದಿದ್ದರು.