ಮಾಜಿ ಸಚಿವ ಜನಾರ್ದನ ಪೂಜಾರಿ ಕುದ್ರೋಳಿ ಕ್ಷೇತ್ರಕ್ಕೆ‌ ಭೇಟಿ…! ದೇವರಲ್ಲಿ ಕ್ಷಮೆ ಯಾಚಿಸಿದ ಪೂಜಾರಿ

ಮಂಗಳೂರು: ಕಳೆದ ಲೋಕಸಭಾ ಚುನಾವಣಾ ಸಂದರ್ಭ ಕಾಂಗ್ರೆಸ್ ಅಭ್ಯರ್ಥಿ ‌ಅಭ್ಯರ್ಥಿ ಮಿಥುನ್ ರೈ ಗೆಲ್ಲದಿದ್ದರೆ ಕುದ್ರೋಳಿ ಗೋಕರ್ಣನಾಥ ಕ್ಷೇತ್ರಕ್ಕೆ ಹೋಗುವುದಿಲ್ಲ ಎಂದು ಹೇಳಿದ್ದ ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಭಾನುವಾರ ಕ್ಷೇತ್ರಕ್ಕೆ ಭೇಟಿ‌ ನೀಡಿ ಅಚ್ಚರಿ ಮೂಡಿಸಿದ್ದಾರೆ.
ಕುದ್ರೋಳಿ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ಮುಂದೆ ಕೈಮುಗಿದು, ಕ್ಷೇತ್ರಕ್ಕೆ ಭೇಟಿ ನೀಡುವುದಿಲ್ಲ ಅಂತ ಹೇಳಿ ದೊಡ್ಡ ತಪ್ಪು ಮಾಡಿದ್ದೇನೆ. ಹಾಗಾಗಿ ದೇವರ ಬಳಿ ಬಂದು ತಪ್ಪಿಗೆ ಕ್ಷಮೆ ಯಾಚಿಸಿದ್ದೇನೆ ತಪ್ಪನ್ನು ಸರಿ ಮಾಡದೆ ಸತ್ತರೆ ದೇವರು ಕ್ಷಮಿಸಲ್ಲ. ಅದಕ್ಕೆ ದೇವರ ಆದೇಶದ ಮೇರೆಗೆ ಕ್ಷೇತ್ರಕ್ಕೆ ಬಂದು ನನ್ನ ತಪ್ಪಿಗೆ ಕ್ಷಮೆ ಯಾಚಿಸಿದ್ದೇನೆ ಎಂದಿದ್ದಾರೆ.
 
ಅಂದು‌ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಿಥುನ್‌ ರೈ, ಬಿಜೆಪಿಯ ನಳಿನ್ ಕುಮಾರ್ ಕಟೀಲು ಎದುರು ಸುಮಾರು ೨ ಲಕ್ಷಕ್ಕೂ ಅಧಿಕ ಮತಗಳಿಂದ ಸೋಲು ಕಂಡಿದ್ದರು.
ಹೀಗಾಗಿ‌ ನಂತರ ಕೆಲ ದಿನಗಳ ಕಾಲ ತಮ್ಮ ಮುಂದಾಳತ್ವದ ಕುದ್ರೋಳಿ ಕ್ಷೇತ್ರಕ್ಕೆ ಪೂಜಾರಿ ಅವರು ಬಾರದೇ, ಯಾವುದೇ ಪ್ರತಿಕ್ರಿಯೆ ಕೂಡ ನೀಡದೇ ದೂರ ಉಳಿದಿದ್ದರು.