ಕಾರ್ಕಳ: ವ್ಯಕ್ತಿ ನಾಪತ್ತೆ

ಕಾರ್ಕಳ: ಮುಂಡ್ಕೂರು ಗ್ರಾಮದ ಜಾರಿಗೆಕಟ್ಟೆ ನಿವಾಸಿ ಉದಯ್ ಕುಮಾರ್ (38) ಎಂಬವರು ಮಾರ್ಚ್ 25 ರಂದು ತಂದೆಯ ಮನೆಯಾದ ಕಾಂತಾವರ ಗ್ರಾಮದ ಬೇಲಾಡಿಯ ಮನೆಯಿಂದ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 6 ಇಂಚು ಎತ್ತರ, ಗೋಧಿ ಮೈಬಣ್ಣ, ಕೋಲು ಮುಖ, ಸಪೂರ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ
ಎಂದು ಪ್ರಕಟಣೆ ತಿಳಿಸಿದೆ.