ಬೆಳ್ತಂಗಡಿ: ಮುಂಬಯಿ ಥಾಣೆಯಿಂದ ಬಂದ ಮಹಿಳೆಗೆ ಕೊರೊನಾ ದೃಢ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಓರ್ವ ಮಹಿಳೆಗೆ ಕೊರೊನಾ ದೃಢಪಟ್ಟಿದೆ.
ಮುಂಬಯಿ ಥಾಣೆಯ ಡೊಂಬಿವಿಲಿಯಿಂದ  ಈ ಮಹಿಳೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಗೆ ಬಂದಿದ್ದರು. ಮೇ 18ಕ್ಕೆ ಈ ಮಹಿಳೆ ಬೆಳ್ತಂಗಡಿ ಗೆ ಬಂದಿದ್ದ ಇವರನ್ನು ಕ್ವಾರಂಟೈನ್ ನಲ್ಲಿರಿಸಲಾಗಿತ್ತು. ಇವರಿಗೆ ಇಂದು ಕೊರೊನಾ ದೃಢಪಟ್ಟಿದೆ. ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ 62ಕ್ಕೆ ಏರಿಕೆಯಾಗಿದೆ. ಇದರಲ್ಲಿ 21 ಮಂದಿ ಗುಣಮುಖ ರಾಗಿದ್ದು, ಐವರು ಸಾವನ್ನಪ್ಪಿದ್ದರು. 36 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.