ಮಂಗಳೂರು: ಕೊರೊನ ಸೋಂಕಿತ ಮತ್ತೋರ್ವ ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್

ಮಂಗಳೂರು: ಮಂಗಳೂರಿನಲ್ಲಿ ಓರ್ವ ಕೊರೊನಾ ಪೀಡಿತ ಗುಣಮುಖರಾಗಿದ್ದು, ಸೋಮವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ದಕ್ಷಿಣ ಕನ್ನಡ ‌ಜಿಲ್ಲೆಯ ಸುಳ್ಯ ಮೂಲದ 34 ವರ್ಷದ ಯುವಕ ಡಿಸ್ಚಾರ್ಜ್ ಆಗಿದ್ದಾರೆ. ದುಬೈಯಿಂದ‌ ಮಾರ್ಚ್ 18 ರಂದು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಅನಂತರ ಸುಳ್ಯದ ತನ್ನ ಮನೆಗೆ ತೆರಳಿದ್ದರು.
ಮಾರ್ಚ್ 28 ರಂದು ಅನಾರೋಗ್ಯದಿಂದ ವೆನ್ಲಾಕ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದು, ಮಾರ್ಚ್‌ 31ರಂದು ಗಂಟಲಿನ ದ್ರವ ಪರೀಕ್ಷೆಯಲ್ಲಿ ಕೊರೊನಾ ಸೋಂಕು ದೃಡಪಟ್ಟಿತ್ತು.
ಎಪ್ರಿಲ್ 11 ಹಾಗೂ 12 ರಂದು ಗಂಟಲಿನ ದ್ರವ ಮಾದರಿ ಪರೀಕ್ಷೆಯಲ್ಲಿ ಕೊರೊನಾ ನೆಗೆಟಿವ್ ಬಂದಿದ್ದು, ಇಂದು ಗುಣಮುಖವಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಹೀಗಾಗಿ ರಾಜ್ಯದಲ್ಲಿ ಕೋರೋನಾ ಪ್ರಕರಣಗಳಲ್ಲಿ 3ನೇ ಸ್ಥಾನದಲ್ಲಿದ್ದ ದಕ್ಷಿಣ ಕನ್ನಡ, ಇದೀಗ 6ನೇ ಸ್ಥಾನ ಇಳಿಕೆಯಾಗಿದೆ. ಜಿಲ್ಲೆಯಲ್ಲಿ 12 ಪ್ರಕರಣಗಳಲ್ಲಿ 8 ಮಂದಿ ಗುಣಮುಖರಾಗಿದ್ದಾರೆ.