ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಾಜೀನಾಮೆಗೆ ಬಿಜೆಪಿಯೇ ನೇರ ಹೊಣೆ ಎಂದು ಹೇಳಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಯಿತು.
ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ರಾಜ್ಯದಲ್ಲಿ ದಕ್ಷ ಅಧಿಕಾರಿಗಳು ವರ್ಗಾವಣೆಯಾಗುತ್ತಿದ್ದಾರೆ. ರಾಜ್ಯದಲ್ಲಿ ನಿಷ್ಠಾವಂತ ಅಧಿಕಾರಿಗಳು ಕೆಲಸ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ದಕ್ಷ ಅಧಿಕಾರಿಗಳು ರಾಜೀನಾಮೆ ನೀಡುತ್ತಿದ್ದಾರೆ. ಸಿಎಂ ಯಡಿಯೂರಪ್ಪ ಸಸಿಕಾಂತ್ ಸೆಂಥಿಲ್ ಮನವೊಲಿಸಿ ರಾಜೀನಾಮೆ ಹಿಂಪಡೆಯುವಂತೆ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿ’ ಸೋಜಾ ಆಕ್ರೋಶ ಹೊರ ವ್ಯಕ್ತಪಡಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ಪರಿಷತ್ ಸದಸ್ಯ ಹರೀಶ್ ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಇನ್ನೊಂದು ದಕ್ಷ ಅಧಿಕಾರಿಯ ವರ್ಗಾವಣೆ ಶೀಘ್ರದಲ್ಲೇ ನಡೆಯಲಿದೆ. ಇದಕ್ಕೆ ಐದು ಕೋಟಿ ಡೀಲ್ ನಡೆದಿದೆ ಅಂತ ಕಿಡಿ ಕಾರಿದರು.
ಜಿಲ್ಲಾ ಕಾಂಗ್ರೆಸ್ ವಿವಿಧ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.












