ಮಂಗಳೂರು: ಡೆಂಗ್ಯೂಗೆ ಮತ್ತೊಂದು ಬಲಿ

ಮಂಗಳೂರು: ದ.ಕ.‌ಜಿಲ್ಲೆಯಲ್ಲಿ ಡೆಂಗ್ಯು ಜ್ವರ ಅಟ್ಟಹಾಸ ಮೆರೆಯುತ್ತಿದ್ದು, ಗುರುವಾರ ಮಂಗಳೂರಿನಲ್ಲಿ ಮತ್ತೊಬ್ಬನನ್ನು ಬಲಿ ಪಡೆದಿದೆ.
ಮಂಗಳೂರಿನ ಬೋಳಾರ ಮುಳಿಹಿತ್ಲು ನಿವಾಸಿ ಕಾರ್ತಿಕ್ ಶೆಟ್ಟಿ (22) ಮೃತರು.
ಎಂಟು ದಿನಗಳಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕಾರ್ತಿಕ್ ಗುರುವಾರ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ.