ಮಂಗಳೂರು: ದ.ಕ. ಜಿಲ್ಲೆಯಲ್ಲಿ ಸಂಭ್ರಮದ ಗಣರಾಜ್ಯೋತ್ಸವ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಭ್ರಮದಿಂದ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.
ಜಿಲ್ಲಾಡಳಿತದ ವತಿಯಿಂದ ಮಂಗಳೂರು ನಗರದ ನೆಹರೂ ಮೈದಾನದಲ್ಲಿ ಗಣರಾಜ್ಯೋತ್ಸವ ಸಮಾರಂಭ ಹಾಗು ಸಾಧಕರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನಿಸಲಾಯಿತು.
ಕಾರ್ಯಕ್ರಮದಲ್ಲಿ ಧ್ವಜಾರೋಹಣಗೈದು ಅನಂತರ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ದುಷ್ಟಶಕ್ತಿಗಳು ತಲೆ ಎತ್ತದಂತೆ‌ ಮಾಡುವುದರ ಜೊತೆಗೆ ಸರ್ವಧರ್ಮಗಳನ್ನು ಗೌರವಿಸಿ, ಸಮಾಜದ ಶಾಂತಿಗೆ ಭಂಗ ತರುವ ಚಟುವಟಿಕೆಗಳಿಗೆ ಅವಕಾಶ ಕೊಡದ ಸರ್ವಧರ್ಮೀಯರು ಸಮನ್ವಯದಲ್ಲಿ ಬಾಳಲು ಪ್ರತಿಜ್ಞೆ ಮಾಡೋಣ. ಜಿಲ್ಲೆಯಲ್ಲಿ ಕಳೆದ ಅತಿವೃಷ್ಟಿಯಿಂದ 893 ಕೋ.ರೂ. ನಷ್ಟವಾಗಿದೆ. ಆ ಪೈಕಿ 1914 ಕುಟುಂಬಗಳಿಗೆ ಆರ್ಥಿಕ ‌ನೆರವು‌ ನೀಡಲಾಗಿದೆ ಎಂದು ಅವರು ತಿಳಿಸಿದರು.
ಈ ಸಂದರ್ಭ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬ ಅವರನ್ನು ಸನ್ಮಾನಿಸಲಾಯಿತು. ದ.ಕ. ಜಿಲ್ಲೆಯ 10 ಮಂದಿಗೆ ಸರ್ವೋತ್ತಮ‌ ಪ್ರಶಸ್ತಿ ಪ್ರದಾನಿಸಲಾಯಿತು ಹಾಗು 32 ಮಂದಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು.