ಮಹಾನಗಪಾಲಿಕೆ ಫಲಿತಾಂಶ ಅಭಿವೃದ್ಧಿಯ ಗೆಲುವು: ಶಾಸಕ ಕಾಮತ್

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಇದೀಗ ಅಭಿವೃದ್ಧಿಯ ಶಖೆ ಪ್ರಾರಂಭವಾಗಿದೆ ಎಂದು ಶಾಸಕ ಕಾಮತ್ ಹೇಳಿದ್ದಾರೆ.
ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಪ್ರಚಂಡ ಬಹುಮತ ಸಾಧಿಸಿದ ಕುರಿತು ಮಾತನಾಡಿದ ಅವರು, ಕಳೆದ ಕಾಂಗ್ರೇಸ್ ಆಡಳಿತದ ಜನ ವಿರೋಧಿ ನೀತಿಯಿಂದ ಬೇಸತ್ತ ಜನರು ಈ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿದ್ದಾರೆ. ಮಂಗಳೂರಿನ ಜನತೆ  ಜನರಿಗೆ ಪೊಳ್ಳು ಭರವಸೆಗಳು ಬೇಕಿಲ್ಲ. ಅವರು ನಮ್ಮಿಂದ ಬಯಸುವುದು ಅಭಿವೃದ್ಧಿಯನ್ನು ಮಾತ್ರ. ಈಗ ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರಕಾರವಿದೆ. ಹಾಗಾಗಿ ನಂಬಿಕೆ ಹುಸಿಯಾಗದಂತೆ ನಿರಂತರ ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಮೂಲಕ ಜನತೆಗೆ ನೀಡಿರುವ ಮಾತನ್ನು ಉಳಿಸಿಕೊಳ್ಳುತ್ತೇವೆ ಎಂದರು.