ಮಂಗಳೂರು ವಿವಿಯ ಪದವಿ ಪರೀಕ್ಷೆ: ಕುಂದಾಪುರ ಡಾ. ಬಿ.ಬಿ.ಹೆಗ್ಡೆ ಕಾಲೇಜಿನ ಕಾವ್ಯ ದೇವಾಡಿಗ ಪ್ರಥಮ ರ‍್ಯಾಂಕ್, ಸುಮಧುರ ಶೆಟ್ಟಿ ನಾಲ್ಕನೇ ರ‍್ಯಾಂಕ್

ಉಡುಪಿ: ಮಂಗಳೂರು ವಿ.ವಿ.ಯ 2020- 21ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಾದ ಕಾವ್ಯ ದೇವಾಡಿಗ ಬಿ.ಸಿ.ಎ. ಪದವಿಯಲ್ಲಿ ಪ್ರಥಮ ರ‍್ಯಾಂಕ್ ಹಾಗೂ ಸುಮಧುರ ಶೆಟ್ಟಿ ನಾಲ್ಕನೇ ರ‍್ಯಾಂಕ್ ಪಡೆದುಕೊಂಡಿರುತ್ತಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಬಿ.ಎಮ್. ಸುಕುಮಾರ್ ಶೆಟ್ಟಿ ಹಾಗೂ ಆಡಳಿತ ಮಂಡಳಿಯ ಸದಸ್ಯರು, ಪ್ರಾಂಶುಪಾಲರು ಹಾಗೂ ಬೋಧಕ- ಬೋಧಕೇತರರು ಅಭಿನಂದನೆ ಸಲ್ಲಿಸಿದ್ದಾರೆ.