ಮಂಗಳೂರು: ಇಲ್ಲಿನ ಶಕ್ತಿ ರೆಸಿಡೆನ್ಸಿಯಲ್ ಶಾಲೆಯಲ್ಲಿ ವಿಶ್ವ ಸಂಗೀತ ದಿನ ಆಚರಿಸಲಾಯಿತು.
ಮುಖ್ಯ ಅತಿಥಿಯಾಗಿದ್ದ ಎಕ್ಸ್ಪರ್ಟ್ ಸಮೂಹ ಸಂಸ್ಥೆಗಳ ಐಟಿ ನಿರ್ದೇಶಕ ಅಂಕುಶ್ ಎನ್.ನಾಯಕ್ ಮಾತನಾಡಿ, ‘ ದಿನದಲ್ಲಿ ಕನಿಷ್ಠ ಒಂದು ಗಂಟೆ ಸಮಯವನ್ನು ನಮ್ಮ ಹವ್ಯಾಸಗಳಿಗೆ ಮೀಸಲಿಡಬೇಕು.ಪ್ರತಿಯೊಬ್ಬರು ಯಾವುದಾದರೂ ರೀತಿಯ ಸಂಗೀತ ಕಲಿಯಬೇಕು.ಸಂಗೀತವು ನಮ್ಮಲ್ಲಿ ಕ್ರಿಯಾಶೀಲತೆ ಹಾಗೂ ಏಕಾಗ್ರತೆಯನ್ನು ಹೆಚ್ಚಿಸುತ್ತದೆ ಎಂದರು.
ಸಂಗೀತ ದಿನಾಚರಣೆ ಪ್ರಯುಕ್ತ ಶಕ್ತಿ ಶಾಲೆಯ ವಿದ್ಯಾರ್ಥಿಗಳು ಸಂಗೀತ, ವಾದ್ಯ ಕಾರ್ಯಕ್ರಮ ನಡೆಸಿಕೊಟ್ಟರು. ಶಕ್ತಿ ವಿದ್ಯಾ ಸಂಸ್ಥೆಯ ಆಡಳಿತಾಧಿಕಾರಿ ಕೆ. ಸಿ. ನಾಯ್ಕ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಸಲಹೆಗಾರ ರಮೇಶ್ ಕೆ, ಪ್ರಾಂಶುಪಾಲರಾದ ವೆಂಕಟೇಶ್ ಮೂರ್ತಿ, ಬಬಿತಾ ಸೂರಜ್ ಉಪಸ್ಥಿತರಿದ್ದರು. ಶಿಕ್ಷಕಿ ಅರುಣೀತ ಕಾರ್ಯಕ್ರಮ ನಿರೂಪಿಸಿದರು.












