ಕೊರೊನಾ ಶಂಕೆ: ಸಾಗರದ ಮಹಿಳೆಯ ಮಾದರಿಯನ್ನು ಮತ್ತೊಮ್ಮೆ ಪರೀಕ್ಷೆಗೆ ಕಳುಹಿಸಿದ ವೈದ್ಯರು 

ಮಣಿಪಾಲ: ಶಂಕಿತ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಾಗರ ತಾಲ್ಲೂಕಿನ ಆನಂದಪುರದ ಮಹಿಳೆಯ ಗಂಟಲಿನ ದ್ರವ ಹಾಗೂ ರಕ್ತದ ಮಾದರಿಯನ್ನು ಪರೀಕ್ಷೆಗಾಗಿ ಮತ್ತೆ  ಶಿವಮೊಗ್ಗ ದಲ್ಲಿರುವ ಪ್ರಯೋಗಾಲಯಕ್ಕೆ ಇಂದಯ ಕಳುಹಿಸಲಾಗಿದೆ ಎಂದು ಡಿಎಚ್ಓ ಡಾ.ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ.
ಈಗಾಗಲೇ ಶಿವಮೊಗ್ಗ ದಲ್ಲಿ ಹಾಗೂ ಮಣಿಪಾಲದಲ್ಲಿ ನಡೆಸಿದ ಮಾದರಿಗಳ ಪರೀಕ್ಷಾ ವರದಿ ನೆಗೆಟೀವ್ ಬಂದಿದ್ದು,  ಈಗ ಮಹಿಳೆಯಲ್ಲಿ ಮತ್ತೆ ಕೊರೊನಾ ಲಕ್ಷಣ ಕಾಣಿಸಿಕೊಂಡಿರುವುದರಿಂದ ಮತ್ತೊಮ್ಮೆ ಪರೀಕ್ಷೆಗಾಗಿ ಮಾದರಿಗಳನ್ನು ರವಾನಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.