ಮಾ.9: ಇಂಧನ ಸಚಿವರ ಪ್ರವಾಸ ಕಾರ್ಯಕ್ರಮ       

ಉಡುಪಿ, ಮಾ.8:  ರಾಜ್ಯದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ಅವರು ಮಾರ್ಚ್ 9 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಅಂದು ಬೆಳಗ್ಗೆ 7.30 ಕ್ಕೆ ನಿಟ್ಟೆ ಪದವು ಗೃಹ ಕಚೇರಿಯಲ್ಲಿ ಯುವಮೋರ್ಚಾ ತಂಡದೊಂದಿಗೆ ಹಾಗೂ 9 ಗಂಟೆಗೆ ಕಾರ್ಕಳ ವಿಕಾಸ ಕಚೇರಿಯಲ್ಲಿ ಎಸ್.ಸಿ.ಎಸ್.ಟಿ ಮೋರ್ಚಾದೊಂದಿಗೆ ಕಾರ್ಕಳ ಉತ್ಸವ ಕುರಿತ ಪೂರ್ವಭಾವಿ ಸಭೆ ನಡೆಸಲಿದ್ದಾರೆ.

ಗಂಟೆ 11ಕ್ಕೆ ಹೆಬ್ರಿ ಚೈತನ್ಯ ಸಭಾಭವನದಲ್ಲಿ ಹೆಬ್ರಿ ಉತ್ಸವ ಸ್ವಚ್ಛತೆ ಕಾರ್ಯಕ್ರಮದಲ್ಲಿ ಭಾಗಿ, ಮಧ್ಯಾಹ್ನ 12 ಗಂಟೆಗೆ ಕಾರ್ಕಳ ತಾಲೂಕು ಪಂಚಾಯತ್ ಕಚೇರಿಯಲ್ಲಿ ಕಾಲೇಜುಗಳ ಪ್ರಾಂಶುಪಾಲರೊಂದಿಗೆ ಹಾಗೂ 2.30 ಕ್ಕೆ ಕಾರ್ಕಳ ವಿಕಾಸ ಕಚೇರಿಯಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಮುಖರೊಂದಿಗೆ ಕಾರ್ಕಳ ಉತ್ಸವ ಕುರಿತ ಪೂರ್ವಭಾವಿ ಸಭೆ ನಡೆಸುವರು.

ಗಂಟೆ 3ಕ್ಕೆ ಕಾರ್ಕಳ ವಿಕಾಸ ಕಚೇರಿಯಲ್ಲಿ ಕಾರ್ಕಳ ಉತ್ಸವ ಮೆರವಣಿಗೆ ಪ್ರಮುಖರೊಂದಿಗೆ ಪೂರ್ವಭಾವಿ ಸಭೆ, ಸಂಜೆ 4 ಕ್ಕೆ ಕಾರ್ಕಳ ಗಾಂಧಿ ಮೈದಾನದಲ್ಲಿ ಕಾರ್ಕಳ ಉತ್ಸವದ ಎಲ್ಲಾ ಸಮಿತಿಗಳ ಪ್ರಮುಖರು ಮತ್ತು ಪ್ರಬಂಧಕರೊಂದಿಗೆ ಸಭೆ ನಡೆಸಿ, ನಂತರ ಕಾರ್ಕಳದಲ್ಲಿ ವಾಸ್ತವ್ಯ ಮಾಡಲಿರುವರು.