ಮರವಂತೆ: ಜುಲೈ 28ರಂದು ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನದಲ್ಲಿ “ಕರ್ಕಾಟಕ ಅಮಾವಾಸ್ಯೆ ಜಾತ್ರೆ”

ಕುಂದಾಪುರ: ಹಿಂದೂ ಧಾರ್ಮಿಕ ದತ್ತಿ ಇಲಾಖೆ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನ ಮರವಂತೆ ಬೈಂದೂರು ತಾಲೂಕುನಲ್ಲಿ ವರ್ಷಂಪ್ರತಿ ಶ್ರೀ ವರಾಹ ದೇವರ ಸನ್ನಿಧಿಯಲ್ಲಿ ನಡೆಯಲಿರುವ “ಕರ್ಕಾಟಕ ಅಮಾವಾಸ್ಯೆ ಜಾತ್ರೆ” ಯು ಇದೇ ತಾ.28-07-2022ನೇ ಗುರುವಾರ ಜರುಗಲಿರುವ ಪ್ರಯುಕ್ತ ಭಕ್ತಾದಿಗಳಾದ ತಾವೆಲ್ಲರೂ ಆಗಮಿಸಿ, ನಮ್ಮೊಂದಿಗೆ ಕಾರ್ಯಕ್ರಮದಲ್ಲಿ ಸಹಕರಿಸಿ, ಶ್ರೀದೇವರ ಸಿರಿಮುಡಿ ಗಂಧ- ಪ್ರಸಾದ ಸ್ವೀಕರಿಸಿ, ಕೃತಾರ್ಥರಾಗಬೇಕಾಗಿ ಅಪೇಕ್ಷಿಸುವ ದೇವಸ್ಥಾನದ ಅರ್ಚಕರು ಉಪಾದಿವಂತರು, ನೌಕರ ವರ್ಗ ಮತ್ತು ಆಸುಪಾಸಿನ ಊರಿನ ಗ್ರಾಮಸ್ಥರು ಸತೀಶ ಎಂ. ನಾಯಕ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನ, ಮರವಂತೆ ಪ್ರಕಟಣೆ ತಿಳಿಸಿದೆ.