ಎಸ್‍ಎಸ್‍ಎಲ್‍ಸಿ ಪರೀಕ್ಷೆ: ನಿಗಮದ ಬಸ್‍ಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ

ಉಡುಪಿ: ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ಮಾರ್ಚ್ 21 ರಿಂದ ಪ್ರಾರಂಭವಾಗುತ್ತಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ, ಕ.ರಾ.ರ.ಸಾ. ನಿಗಮವು, ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಯುವ ದಿನಗಳಲ್ಲಿ ಅಂದರೆ ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ಪರೀಕ್ಷೆಗೆ ಹಾಜರಾಗುವ, ನಿಗಮದ ವತಿಯಿಂದ ವಿತರಿಸಿರುವ ವಿದ್ಯಾರ್ಥಿ ರಿಯಾಯಿತಿ ಬಸ್‍ಪಾಸ್ ಹೊಂದಿರುವ  ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳು ಪರೀಕ್ಷಾ ಅವಧಿಯಲ್ಲಿ ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಮತ್ತು ವಾಸಸ್ಥಳಕ್ಕೆ ಹಿಂದಿರುಗುವಾಗ ಬಸ್ ಪಾಸ್ ಹಾಗು ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದ್ದು, ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವಂತೆ ಮಂಗಳೂರು ಕ.ರಾ.ರ.ಸಾ.ಸಂ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.