ಮರೋಳಿ: ತಡೆಗೋಡೆ ಕಾಮಗಾರಿಗೆ ಗುದ್ದಲಿಪೂಜೆ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಮರೋಳಿ ವಾರ್ಡ್‌ ನ ಬಜ್ಜೋಡಿಯಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರ ಸೂಚನೆಯಂತೆ ಸ್ಥಳೀಯ ಮುಖಂಡರು ಗುದ್ದಲಿಪೂಜೆ ನೆರವೇರಿಸಿದರು.
ಮರೋಳಿ ವಾರ್ಡ್ ಅಧ್ಯಕ್ಷರಾದ ಜಗನ್ನಾಥ್ ದೊಡ್ಡಮನೆ, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಮರೋಳಿ, ವಾರ್ಡ್ ಮಹಿಳಾ ಮೋರ್ಚದ ಅಧ್ಯಕ್ಷರಾದ ಸರಳ,  ಬಿಜೆಪಿ ನಾಯಕರಾದ ರಮೇಶ್ ಕಂಡೆಟ್ಟು, ಭಾಸ್ಕರಚಂದ್ರ ಶೆಟ್ಟಿ, ಅಜಯ್, ಪ್ರಮುಖರಾದ ಜಗದೀಶ್ ಶೆಣೈ, ಕೃಷ್ಣ.ಟಿ, ಪುರುಷೋತ್ತಮ ಸುವರ್ಣ, ಪ್ರಕಾಶ್ ನಾಯಕ್, ರಂಜಿತ್, ಮಾಲತಿ ಶೆಟ್ಟಿ, ಅರುಣ್ ಶೆಟ್ಟಿ ಉಪಸ್ಥಿತರಿದ್ದರು.