ಮಂಗಳೂರು: ನ. 27 ರಂದು ಗುರು ಬೆಳದಿಂಗಳು ವತಿಯಿಂದ ಬೃಹತ್ ಉಚಿತ ಆರೋಗ್ಯ ಮೇಳ

ಮಂಗಳೂರು: ಗುರುಬೆಳದಿಂಗಳು ಫೌಂಡೇಶನ್‌ ಕುದ್ರೋಳಿ ಆಶ್ರಯದಲ್ಲಿ ಭರವಸೆ ಚಾರಿಟೆಬಲ್ ಫೌಂಡೇಶನ್ ಬೆಂಗಳೂರು ವತಿಯಿಂದ ನ. 27ರಂದು ಬೆಳಗ್ಗೆ 8.30 ರಿಂದ ಸಾಯಂಕಾಲ 4 ರವರೆಗೆ ಮಂಗಳೂರಿನ ಶ್ರೀ ಗೋಕರ್ಣನಾಥ ಕಾಲೇಜು ಸಭಾಂಗಣದಲ್ಲಿ ಪುರುಷ, ಮಕ್ಕಳು ಮತ್ತು ಮಹಿಳೆಯರಿಗಾಗಿ ಬೃಹತ್ ಉಚಿತ ಆರೋಗ್ಯ  ಮೇಳ ಆಯೋಜಿಸಲಾಗಿದೆ.

ಮಹಿಳೆಯರ ಮುಟ್ಟಿನ ತೊಂದರೆ, ಬಂಜೆತನ, ಲೈಂಗಿಕ ಸಮಸ್ಯೆ, ರಕ್ತಹೀನತೆ, ಎಚ್ ಪಿ ವಿ ಪರೀಕ್ಷೆ (ಗರ್ಭಕಂಠದ ಕ್ಯಾನ್ಸರ್, ಸ್ತನ ಕ್ಯಾನ್ಸರ್) ತಡೆಗಟ್ಟವಿಕೆ, ಎಲ್ಲಾ ಸ್ತ್ರೀ ರೋಗಗಳ ತಡೆಗಟ್ಟುವಿಕೆ, ಮಾರ್ಗದರ್ಶನ ಮತ್ತು ಚಿಕಿತ್ಸೆ ಬಗ್ಗೆ ಅರಿವು ಹಾಗೂ ಆಪ್ತಸಮಾಲೋಚನೆಯನ್ನು ಖ್ಯಾತ ಸ್ತ್ರೀರೋಗ ತಜ್ಞೆ, ರಾಜ್ಯ ಪ್ರಶಸ್ತಿ ಪುರಸ್ಕೃತೆ, ಕರ್ನಾಟಕ ರಾಜ್ಯದ ಪ್ರಥಮ ಲೈಂಗಿಕ ತಜ್ಞೆ ಎಂಬ ಹೆಗ್ಗಳಿಕೆಗೆ ಪಾತ್ರರಾದ ಡಾ.ಪದ್ಮನಿ ಪ್ರಸಾದ್ ನೇತೃತ್ವದಲ್ಲಿ ನೀಡಲಾಗುವುದು. ಖ್ಯಾತ ವೈದ್ಯರ ತಂಡದೊಂದಿಗೆ ಈ ಆರೋಗ್ಯ ಮೇಳ ನಡೆಯಲಿದೆ.

ಸಾರ್ವಜನಿಕರು ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ಸಂಸ್ಥೆ ತಿಳಿಸಿದೆ.

ಮಾಹಿತಿಗಾಗಿ 9901246123 ಸಂಪರ್ಕಿಸಬಹುದು.