ಮೇ 14: ಕೇಂದ್ರ ಸಚಿವರ ಪ್ರವಾಸ ಕಾರ್ಯಕ್ರಮ

ಉಡುಪಿ: ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಅವರು ಮೇ 14 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಮೇ 13 ರಂದು ರಾತ್ರಿ ಉಡುಪಿಗೆ ಆಗಮಿಸಿ, ವಾಸ್ತವ್ಯ ಮಾಡಲಿದ್ದು, ಮೇ 14 ರಂದು ಉಡುಪಿಯಲ್ಲಿ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ನಂತರ ಮಂಗಳೂರಿಗೆ ತೆರಳಲಿರುವರು.