ಇಂದ್ರಾಳಿ: ಎಂಸಿಸಿ ಲೆಕ್ಕಾಧಿಕಾರಿಯ ಕಾರು ಚಾಲಕನ ಮೃತದೇಹ ರೈಲ್ವೆ ಹಳಿಯಲ್ಲಿ ಪತ್ತೆ

ಇಂದ್ರಾಳಿ: ಮಂಗಳೂರು ಮಹಾನಗರ ಪಾಲಿಕೆಯ (ಎಂಸಿಸಿ) ಮುಖ್ಯ ಲೆಕ್ಕಾಧಿಕಾರಿಯ ಕಾರು ಚಾಲಕನ ಮೃತದೇಹ ರೈಲ್ವೆ ಹಳಿಯಲ್ಲಿ ಪತ್ತೆಯಾಗಿದೆ. ಇಂದ್ರಾಳಿಯಲ್ಲಿ ವೇಗವಾಗಿ ಬರುತ್ತಿದ್ದ ರೈಲಿನೆದುರು ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಜನವರಿ 25ರ ಬುಧವಾರ ಬೆಳಗ್ಗಿನ ಜಾವ ಈ ಘಟನೆ ನಡೆದಿದ್ದು, ಮೃತರನ್ನು ಹೆಬ್ರಿಯ ರಾಘವೇಂದ್ರ ಹೆಗಡೆ ಎಂದು ಗುರುತಿಸಲಾಗಿದೆ. ಘಟನೆ ನಡೆದ ಸ್ಥಳದ ಬಳಿ ಕಾರು ಪತ್ತೆಯಾಗಿದ್ದು, ಕಾರಿನ ಮೇಲೆ ‘ಮಂಗಳೂರು ಮಹಾನಗರ ಪಾಲಿಕೆ – ಮುಖ್ಯ ಲೆಕ್ಕಾಧಿಕಾರಿ’ ಎಂದು ಅಧಿಕೃತ ಬೋರ್ಡ್ ಇದೆ.

ಮೂಲಗಳ ಪ್ರಕಾರ, ರಾಘವೇಂದ್ರ ಹೆಗಡೆ ಗುತ್ತಿಗೆ ಆಧಾರದ ಮೇಲೆ ಎಂಸಿಸಿಯ ಮುಖ್ಯ ಅಕೌಂಟೆಂಟ್ ಅವರ ಕಾರ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದರು.

ಘಟನೆ ನಡೆದ ಸ್ಥಳಕ್ಕೆ ಮಣಿಪಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಲು ಸಮಾಜ ಸೇವಕ ನಿತ್ಯಾನಂದ ಒಳಕಾಡು ಸಹಕರಿಸಿದ್ದಾರೆ ಎಂದು ವರದಿಯಾಗಿದೆ.