ಶ್ರೀ ಕೃಷ್ಣ ಮಠಕ್ಕೆ ಇಂಧನ ಸಚಿವರ ಭೇಟಿ

ಉಡುಪಿ: ಶ್ರೀ ಕೃಷ್ಣ ಮಠಕ್ಕೆ ಇಂಧನ ಸಚಿವರಾದ ಕೆ. ಜೆ.ಜಾರ್ಜ್ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದರು. ನಂತರ ಗೀತಾಮಂದಿರದಲ್ಲಿ ಪರ್ಯಾಯ ಶ್ರೀಪಾದರ ಭೇಟಿ ಮಾಡಿ ಅವರಿಂದ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಶ್ರೀಪಾದರು ವಿಶ್ವ ಗೀತಾ ಪರ್ಯಾಯ ಬಗ್ಗೆ ತಿಳಿಸಿ ಭಗವದ್ಗೀತೆಯ ವ್ಯಾಪಕ ಪ್ರಚಾರದ ಬಗ್ಗೆ ಮಾಹಿತಿ ನೀಡಿ ಸಚಿವರಿಗೆ ಭಗವದ್ಗೀತೆಯ ಪುಸ್ತಕವನ್ನು ನೀಡಿ ಹರಸಿದರು.