ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಲೀಪ್ ಹೆಗ್ಡೆ ಮನೆಗೆ ಸಾರಾಯಿ ಬಾಟಲಿ ಎಸೆತ: ರಾಜಕೀಯ ದುರುದ್ದೇಶ ಶಂಕೆ

ಹಿರಿಯಡ್ಕ: ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಲೀಪ್ ಹೆಗ್ಡೆ ಅವರ ಕುಕ್ಕೆಹಳ್ಳಿ ಮನೆಯಲ್ಲಿ ಶುಕ್ರವಾರದಂದು ತಡ ರಾತ್ರಿ ಸುಮರು 11.30 ಗಂಟೆಗೆ ಕೆಲವು ಕಿಡಿಕೇಡಿಗಳು ಸಾರಾಯಿ ಬಾಟಲಿಯನ್ನು ಎಸೆದು ಬೆದರಿಕೆ ಒಡ್ಡಿದ ಘಟನೆ ನಡೆದಿದೆ. ಯಾರೋ ರಾಜಕೀಯ ದುರುದ್ದೇಶದಿಂದ ಈ ರೀತಿ ಮಾಡಿರಬೇಕು ಎಂದು ದಿಲೀಪ್ ಹೆಗ್ಡೆ ಹೇಳಿದ್ದಾರೆ.

ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಕಿಡಿಗೇಡಿಗಳ ಹುಡುಕಾಟದಲ್ಲಿ ನಿರತರಾಗಿದ್ದಾರೆ.

ಕಿಡಿಗೇಡಿಗಳನ್ನು ಶೀಘ್ರವೆ ಬಂಧಿಸುವಂತೆ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಹಿರಿಯಡ್ಕ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಕುಲಾಲ್, ಕುಕ್ಕೆಹಳ್ಳಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಸುಧಾಕರ ಶೆಟ್ಟಿ, ಕಾಂಗ್ರೆಸ್ ಮುಖಂಡ ಕಿರಣ್ ಹೆಗ್ಡೆ ಮತ್ತು ಪಕ್ಷದ ಕಾರ್ಯಕರ್ತರು ಪೊಲೀಸರನ್ನು ಒತ್ತಾಯಿಸಿದ್ದಾರೆ.