ಜಯಲಕ್ಷ್ಮೀ ಸಿಲ್ಕ್‌ನಲ್ಲಿ ಅಜ್ಞಾತ ವ್ಯಕ್ತಿಯ ಗನ್ ನಿಂದ ಮಿಸ್ ಫೈರಿಂಗ್: ಒಬ್ಬ ಸಿಬ್ಬಂದಿಗೆ ಗಾಯ

ಉಡುಪಿ: ಬನ್ನಂಜೆಯಲ್ಲಿರುವ ಜಯಲಕ್ಷ್ಮೀ ಸಿಲ್ಕ್‌ನಲ್ಲಿ ಇಂದು ಮಧ್ಯಾಹ್ನ ಗನ್ ನಿಂದ ಮಿಸ್‌ ಫೈರಿಂಗ್‌ ಆದ ಪರಿಣಾಮ ಸಿಬ್ಬಂದಿಯೋರ್ವರು ಗಾಯಗೊಂಡಿರುವ ಘಟನೆ ವರದಿಯಾಗಿದೆ.

ಮಳಿಗೆಯಲ್ಲಿಅಜ್ಞಾತ ವ್ಯಕ್ತಿ ಬಿಟ್ಟು ಹೋಗಿದ್ದ ಗನ್‌ ಪತ್ತೆಯಾಗಿತ್ತು. ಅದನ್ನು ಎತ್ತಿಕೊಂಡ ಸಿಬ್ಬಂದಿ ಗನ್ ಅನ್ನು ಪರೀಕ್ಷಿಸಲು ಮುಂದಾಗಿದ್ದಾರೆ. ಈ ವೇಳೆ ಅಲ್ಲೇ ಇದ್ದ ಇನ್ನೋರ್ವ ಸಿಬ್ಬಂದಿಗೆ ಗುಂಡು ತಗುಲಿದ್ದು, ಅವರನ್ನು ಕೂಡಲೇ ಉಡುಪಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಉಡುಪಿ ನಗರ ಪೊಲೀಸರು ದೌಡಾಯಿಸಿದ್ದು, ಗನ್‌ ವಶಕ್ಕೆ ಪಡೆದುಕೊಂಡಿದ್ದಾರೆ. ಗನ್‌ ಯಾರದ್ದು? ಮಳಿಗೆಯಲ್ಲಿ ತಂದಿಟ್ಟಿದ್ದು ಯಾರು ಅನ್ನೋದರ ಕುರಿತು ತನಿಖೆ ನಡೆಸುತ್ತಿದ್ದಾರೆ. ಈ ಹಿಂದೆ ಭೂಗತ ಪಾತಕಿಗಳಿಂದ ಜಯಲಕ್ಷ್ಮೀ ಸಿಲ್ಕ್ಸ್‌ನಲ್ಲಿ ಫೈರಿಂಗ್‌ ನಡೆದಿತ್ತು.