ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ಕ್ರೀಡಾ ಸಂಕೀರ್ಣ ಕಟ್ಟಡಕ್ಕೆ ಶಾಸಕ ರಘುಪತಿ ಭಟ್ ರಿಂದ ಶಿಲಾನ್ಯಾಸ

ಬ್ರಹ್ಮಾವರ: ಇಲ್ಲಿನ ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ (ರಿ.) ಇದರ ಕ್ರೀಡಾ ಸಂಕೀರ್ಣ ಕಟ್ಟಡದ (ಕ್ಲಬ್ ಹೌಸ್) ಶಿಲಾನ್ಯಾಸ ಕಾರ್ಯಕ್ರಮ ಮೇ 23 ರಂದು ಹೇರೂರು ಗ್ರಾಮದ ಹೇರಂಜೆಯಲ್ಲಿ ನೆರವೇರಿತು.

ಕಾರ್ಯಕ್ರಮದಲ್ಲಿ ಶಾಸಕರಾದ ಕೆ. ರಘುಪತಿ ಭಟ್ ರವರು ಭಾಗವಹಿಸಿ ಕ್ರೀಡಾ ಸಂಕೀರ್ಣ ಕಟ್ಟಡದ ಶಿಲಾನ್ಯಾಸವನ್ನು ನೆರವೇರಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಗುರ್ಮೆ ಫೌಂಡೇಶನ್ ಅಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿ, ಚಾಂತಾರು ಗ್ರಾಮ ಪಂಚಾಯತ್ ಅಧ್ಯಕ್ಷ ಮೀರಾ ಸದಾನಂದ ಪೂಜಾರಿ, ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ (ರಿ.) ಅಧ್ಯಕ್ಷ ಎಂ. ಚಂದ್ರಶೇಖರ್ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ಗ್ರೆಗರಿ ಡಿ’ಸಿಲ್ವ ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.