ನಗರಾಭಿವೃದ್ಧಿ ಪ್ರಾಧಿಕಾರದ ವಿಶೇಷ ಸಭೆ: ಶಾಸಕ ರಘುಪತಿ ಭಟ್ ಭಾಗಿ

ಉಡುಪಿ: ನಗರಾಭಿವೃದ್ಧಿ ಪ್ರಾಧಿಕಾರದ ವಿಶೇಷ ಸಭೆ ಸೆ 24 ರಂದು ನಡೆಯಿತು. ಸಭೆಯಲ್ಲಿ ಉಡುಪಿ ಶಾಸಕ ಕೆ. ರಘುಪತಿ ಭಟ್ ಅವರು ಪಾಲ್ಗೊಂಡು ವಿವಿಧ ಯೋಜನೆಗಳನ್ನು ಕಾರ್ಯಗತಗೊಳಿಸುವ ಬಗ್ಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಕಲ್ಮಾಡಿ, ಸದಸ್ಯರುಗಳಾದ ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ಕಿಶೋರ್ ಕುಮಾರ್, ಸುಮಾ ನಾಯ್ಕ್, ಮಾಲತಿ ಸುಧಾಕರ್, ಯೋಗೀಶ್ ಚಂದ್ರಾಧರ್, ಉಡುಪಿ ನಗರ ಸಭೆಯ ಪೌರಾಯುಕ್ತ ಉದಯ್ ಶೆಟ್ಟಿ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತಗುರುಪ್ರಸಾದ್, ನಗರ ಯೋಜನಾ ಸದಸ್ಯ ನವೀನ್ ಕುಮಾರ್, ಸಹಾಯಕ ಯೋಜನಾ ಸದಸ್ಯ ಸಚಿನ್, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಜಗದೀಶ್ ಭಟ್, ಸಹಾಯಕ ಅಭಿಯಂತರ ಗಿರೀಶ್ ಉಪಸ್ಥಿತರಿದ್ದರು.