ಒಂದು ರಾಷ್ಟ್ರ-ಒಂದು ಚುನಾವಣೆ ಸಾಧ್ಯತೆಗಾಗಿ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಸಮಿತಿ ರಚಿಸಿದ ಕೇಂದ್ರ

ನವದೆಹಲಿ: ಸೆಪ್ಟೆಂಬರ್ 18 ರಿಂದ ಉಭಯ ಸದನಗಳ “ವಿಶೇಷ” ಐದು ದಿನಗಳ ಅಧಿವೇಶನವನ್ನು ಕರೆಯುವ ನಿರ್ಧಾರವನ್ನು ಮೋದಿ ಸರ್ಕಾರ ಘೋಷಿಸಿದ ಒಂದು ದಿನದ ಬಳಿಕ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಸಾಧ್ಯತೆಯನ್ನು ಅನ್ವೇಷಿಸಲು ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಸಮಿತಿಯನ್ನು ರಚಿಸಿದೆ.

ದೆಹಲಿಯಲ್ಲಿ ಜಿ 20 ಶೃಂಗಸಭೆಯ ಕೆಲವು ದಿನಗಳ ನಂತರ ವಿಶೇಷ ಅಧಿವೇಶನ ನಡೆಯಲಿದೆ ಎಂದು ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.

“ವಿಶೇಷ ಅಧಿವೇಶನ” ದ ಶಾಸಕಾಂಗ ಕಾರ್ಯಸೂಚಿಯ ಮೇಲಿನ ಊಹಾಪೋಹಗಳು ಶಾಸಕಾಂಗ ವ್ಯವಹಾರದ ಸುತ್ತಲೂ ಸುತ್ತಿಕೊಂಡಿವೆ, ಅದು ಮುಂದಿನ ಸಾರ್ವತ್ರಿಕ ಚುನಾವಣೆಗಳಿಗೆ ಮುಂಚಿತವಾಗಿ ಬಲವಾದ ರಾಜಕೀಯ ಸಂದೇಶವನ್ನು ಹೊಂದಿರುತ್ತದೆ ಎಂದು ಅಂದಾಜಿಸಲಾಗಿದೆ.

‘ಒಂದು ರಾಷ್ಟ್ರ-ಒಂದು ಚುನಾವಣೆ’ ಮಸೂದೆ ಸರ್ಕಾರದ ಕಾರ್ಯಸೂಚಿಯಲ್ಲಿ ಹಲವು ಸಮಯಗಳಿಂದ ಇದ್ದು, ಈ ಬಾರಿ ಲೋಕಸಭೆ ಚುನಾವಣೆಗೂ ಮುನ್ನ ಮಸೂದೆಯನ್ನು ಮಂಡಿಸಲಾಗುವುದೋ ಎನ್ನುವುದು ಇನ್ನಷ್ಟೇ ತಿಳಿಯಬೇಕಿದೆ. ಪ್ರಸ್ತಾವಿತ ಶಾಸನವು ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸಲು ಅವಕಾಶ ನೀಡುತ್ತದೆ. ಇದರಿಂದ ಹಣ ಮತ್ತು ಸಮಯದ ಉಳಿತಾಯವಾಗಲಿದೆ ಎನ್ನುವುದು ತಜ್ಞರ ನಿಲುವಾಗಿದೆ.