ಮೂಡುಬಿದಿರೆ: ರಾಷ್ಟ್ರೀಯ ಹೆದ್ದಾರಿ ಬೆಳುವಾಯಿಯಲ್ಲಿ ಇತ್ತೀಚೆಗೆ ನಡೆದಿದ್ದ ಕಾರು ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಬಂಟ್ವಾಳ ತಾಲ್ಲೂಕಿನ ಸಿದ್ಧಕಟ್ಟೆ ನಿವಾಸಿ ಸಂದೀಪ್ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅಗಸ್ಟ್ 24ರಂದು ಮೃತಪಟ್ಟಿದ್ದಾರೆ.
ಅಗಸ್ಟ್ 16ರಂದು ಸಂದೀಪ್ ಹಾಗೂ ಆತನ ಮೂವರು ಸ್ನೇಹಿತರು ಕಾರಿನಲ್ಲಿ ಮೂಡುಬಿದಿರೆಯಿಂದ ಕಾರ್ಕಳಕ್ಕೆ ಹೋಗುವಾಗ ಬೆಳುವಾಯಿಯಲ್ಲಿ ಕಾರು ರಸ್ತೆ ವಿಭಜಕ್ಕೆ ಡಿಕ್ಕಿ ಹೊಡೆದಿತ್ತು. ಅಪಘಾತದಲ್ಲಿ ವೇಣೂರು ಪೆರ್ಮಡೆ ನಿವಾಸಿ ಸುಮಿತ್ ಸ್ಥಳದಲ್ಲೇ ಮೃತಪಟ್ಟಿದ್ದರು. ಅವರೊಂದಿಗೆ ಇದ್ದ ಸಂದೀಪ್ ಸಹಿತ ಇತರರು ಗಾಯಗೊಂಡಿದ್ದರು. ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












