ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಜಿಲ್ಲೆಗೆ 1 ಕೋಟಿ 15 ಲಕ್ಷಕ್ಕೂ ಅಧಿಕ ಮೊತ್ತ ಮಂಜೂರು

ಉಡುಪಿ: ಜನವರಿ 2020 ರಿಂದ ಡಿಸೆಂಬರ್‌ 2022 ರ ತನಕ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ(PMNRF) ಯಿಂದ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಡುಪಿ ಜಿಲ್ಲೆಗೆ ಮಾನ್ಯ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರ ಶಿಫಾರಸ್ಸಿನ ಮೇರೆಗೆ ಸುಮಾರು ರೂಪಾಯಿ 1,15,60,000(ಒಂದು ಕೋಟಿ ಹದಿನೈದು ಲಕ್ಷದ ಅರ್ವತ್ತು ಸಾವಿರ ರೂಪಾಯಿ)ಮೊತ್ತವನ್ನು ರೋಗಿಗಳ ಚಿಕಿತ್ಸೆಗೆ ಮಂಜೂರು ಮಾಡಲಾಗಿದೆ ಎಂದು ಸಂಸದರ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.