ಕೊಡವೂರು: ಜ.21 ರಂದು ವಿದ್ಯಾರ್ಥಿಗಳಿಗಾಗಿ ಜಿಲ್ಲಾಮಟ್ಟದ ಮುದ್ದುರಾಮ ಹಾಗೂ ಶ್ರೀರಾಮನ ಚಿತ್ರಕಲಾ ಸ್ಪರ್ಧೆ

ಕೊಡವೂರು: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ (SASS) ಇದರ ಜಿಲ್ಲಾ ಘಟಕ, ಜಿಲ್ಲಾ ಮಹಿಳಾ ಘಟಕ, ಕೊಡವೂರು, ಶ್ರೀ ಶಿರಡಿ ಸಾಯಿಬಾಬಾ ಮಂದಿರ ತೋಟದಮನೆ ಮತ್ತು ಕೊಡವೂರು ವಾರ್ಡ್ ಅಭಿವೃದ್ಧಿ ಸಮಿತಿ ಇವರ ಜಂಟಿ ಆಶ್ರಯದಲ್ಲಿ, ಜ.21 ರಂದು ಕೊಡವೂರಿನ ಶ್ರೀಶಿರಡಿಸಾಯಿಬಾಬಾ ಮಂದಿರದಲ್ಲಿ “ಶ್ರೀ ರಾಮೋತ್ಸವ” ಕಾರ್ಯಕ್ರಮವು ನಡೆಯಲಿದ್ದು ಶಾಲಾ ವಿದ್ಯಾರ್ಥಿಗಳಿಗಾಗಿ ಮುದ್ದುರಾಮ ಸ್ಪರ್ಧೆ ಹಾಗೂ ಪ್ರಭು ಶ್ರೀರಾಮನ ಚಿತ್ರ ಬಿಡಿಸುವ ಜಿಲ್ಲಾಮಟ್ಟದ ಚಿತ್ರಕಲಾ ಸ್ಪರ್ಧೆಯೂ ನಡೆಯಲಿರುವುದು.

ಸ್ಪರ್ಧೆಗಾಗಿ ಹೆಸರು ನೋಂದಾಯಿಸಲು ಬಯಸುವ ವಿದ್ಯಾರ್ಥಿಗಳು ಜ.18 ರ ಒಳಗಾಗಿ ಈ ಕೆಳಗೆ ನಮೂದಿಸಿರುವ ಮೊಬೈಲ್ ಸಂಖ್ಯೆಗಳಿಗೆ ಕರೆ ಮಾಡಿ ಹೆಸರನ್ನು ನೋಂದಾಯಿಸಬೇಕಾಗಿ ಕಾರ್ಯಕ್ರಮದ ಸಂಯೋಜಕ ವಿಜಯ್ ಕೊಡವೂರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಳಗ್ಗೆ 9 ಗಂಟೆಗೆ ಸ್ಪರ್ಧೆ ನಡೆಯಲಿದ್ದು, ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರತ್ಯೇಕ ವಿಭಾಗದಲ್ಲಿ ನಡೆಯುವುದು. ಪ್ರತಿ ವಿಭಾಗದಲ್ಲೂ ಪ್ರಥಮ, ದ್ವಿತೀಯ, ತೃತೀಯ ನಗದು ಬಹುಮಾನ. 10 ಆಕರ್ಷಕ ಪ್ರೋತ್ಸಾಹ ಬಹುಮಾನಗಳನ್ನು ನೀಡಲಾಗುವುದು.
ಸಂಪರ್ಕ: ರಂಜಿತ್ ಶೆಟ್ಟಿ-7676213368 , ಗಣೇಶ್ ಕೋಟ- 9448216491