ಮೂಡಬಿದ್ರೆ ತಾಲೂಕು ಕಚೇರಿಯಲ್ಲಿ ಭ್ರಷ್ಟಾಚಾರ ನಿಗ್ರಹ ದಳ ದಾಳಿ, ಪರಿಶೀಲನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ತಾಲೂಕು ಕಚೇರಿಗೆ ಭ್ರಷ್ಟಾಚಾರ ನಿಗ್ರಹದಳ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ನಾಗಕರಿರೊಬ್ಬರ ದೂರಿನ ಮೇರೆಗೆ ಕಾರವಾರ, ಉಡುಪಿ, ಚಿಕ್ಕಮಗಳೂರು ವಿಭಾಗಗಳ  ಎಸ್‍ಪಿ, ಐದು ಮಂದಿ ನಿರೀಕ್ಷಕರು, ಏಳು ಮಂದಿ ಹೆಡ್‍ ಕಾಸ್ಟೇಬಲ್, ನಾಲ್ಕು ಮಂದಿ ಕಾಸ್ಟೇಬಲ್‍ಗಳು ದಾಳಿ ನಡೆಸಿ ಕಚೇರಿಯ ಅಟಲ್‍ಜೀ, ಜನಸ್ನೇಹಿ ವಿಭಾಗ, ಸರ್ವೆ ವಿಭಾಗ ಹಾಗೂ ಉಪ ತಹಶೀಲ್ದಾರ್ ಕಚೇರಿ ಪರಿಶೀಲನೆ ನಡೆಸಿದರು.
ಈ ವೇಳೆ ತಾಲೂಕು ಕಚೇರಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಸೇರಿದಂತೆ ಎಂಟು ಮಂದಿಯನ್ನು ವಿಚಾರಣೆಗೊಳಪಡಿಸಿದರು.
ಸುಮಾರು 66 ಸಾವಿರ ರೂಪಾಯಿ ಹೆಚ್ಚುವರಿ ಹಣ ಪತ್ತೆಯಾಗಿದೆ. ಇದು ಮೂಡಬಿದ್ರೆ ಎಸಿಬಿಗೆ ಕಂಡುಬಂದ ಮೊದಲ ಪ್ರಕರಣವಾಗಿದೆ. ಹೆಚ್ಚುವರಿ ನಗದು ಪತ್ತೆಯಾಗಿದೆ. ಈ ಬಗ್ಗೆ ತಹಶೀಲ್ದಾರ್ ಕಚೇರಿಯ ಸಿಬ್ಬಂದಿ ಸಮಜಾಯಿಸಿ ನೀಡಿದ್ದು, ತನಿಖೆ ನಡೆಸುತ್ತೇವೆ ಎಂದು ಎಸಿಬಿ ಅಧಿಕಾರಿಗಳು ಹೇಳಿದ್ದಾರೆ. ಒಂದು ವೇಳೆ ಸೂಕ್ತ ದಾಖಲೆಗಳಿಲ್ಲದ ಹಣವಾಗಿದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.