ಮುನಿಯಾಲು ಆಯುರ್ವೇದ ಕಾಲೇಜು ಮತ್ತು  ಮಣಿಪಾಲ ಆಸ್ಪತ್ರೆ: ಮಾ.13 : ಉಚಿತ ಆರೋಗ್ಯ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ

ಮಣಿಪಾಲ: ಮುನಿಯಾಲು ಆಯುರ್ವೇದ ಕಾಲೇಜು ಇದರಇಪ್ಪತ್ತನೇ ವರ್ಷದ ಅಂಗವಾಗಿ ಮುನಿಯಾಲು ಆಯುರ್ವೇದ ಆಸ್ಪತ್ರೆ ಹಾಗೂ ಶ್ರೀ ಅನಂತಪದ್ಮನಾಭ ದೇವಸ್ಥಾನ, ಪೆರ್ಡೂರು ಇವರ ಸಹಯೋಗದೊಂದಿಗೆ  ಮಾ. 13   ಪೂರ್ವಾಹ್ನ9.೦೦ ರಿಂದ ಅಪರಾಹ್ನ 1.3೦ರವರೆಗೆ ಎಲ್ಲಾ ತರಹದ ಕಾಯಿಲೆಗಳಿಗೆ ಉಚಿತ ಆರೋಗ್ಯ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರವು ಶ್ರೀ ಅನಂತಪದ್ಮನಾಭ ದೇವಸ್ಥಾನ, ಪೆರ್ಡೂರಿನಲ್ಲಿ ನಡೆಯಲಿರುವುದು.ಹಾಗೂ ಶಿಬಿರವು ಪ್ರತಿ ತಿಂಗಳ ಎರಡನೇ ಶುಕ್ರವಾರದಂದು ಒಂದು ವರ್ಷ ಪರ್ಯಂತ ಕಾಲ ಉಚಿತವಾಗಿ ಚಿಕಿತ್ಸಾ ಶಿಬಿರ ನಡೆಸಲಾಗುವುದು. ಸಾರ್ವಜನಿಕರು, ಗ್ರಾಮಸ್ಥರು ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕಾಗಿ ಸಂಸ್ಥೆಯ ಪ್ರಕಟಣೆ ತಿಳಿಸಿದೆ.