ಮ್ಯೂಸಿಕ ಕಂಪೋಸರ್ ಅರ್ಜುನ್ ಜನ್ಯಾಗೆ ಲಘು ಹೃದಯಾಘಾತ..

ಮೈಸೂರು: ಸಂಗೀತ ಲೋಕದ ಮಾಂತ್ರಿಕ ಅರ್ಜುನ್ ಜನ್ಯಾಗೆ ಲಘು ಹೃದಯಾಘಾತ ಸಂಭವಿಸಿದ್ದು, ಅವರನ್ನು ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಜನ್ಯ ಅವರ ಆರೋಗ್ಯದ ಬಗ್ಗೆ ಪ್ರತಿಕ್ರಿಯಿಸಿದ ವೈದ್ಯ ಆದಿತ್ಯ ಉಡುಪ ‘ಫೆ.೨೩ ಮಧ್ಯಾಹ್ನ ಅರ್ಜುನ್ ಜನ್ಯ ಅವರು ತಲೆ ನೋವು, ಎದೆ ನೋವು, ಗ್ಯಾಸ್ಟ್ರಿಕ್, ಬೆನ್ನು ನೋವು ಎಂದು ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಚಿಕಿತ್ಸೆ ನೀಡಿದಾಗ ಅವರ ಗ್ಯಾಸ್ಟ್ರಿಕ್ ಸಮಸ್ಯೆ ಸರಿ ಹೋಯಿತು. ಫೆ.೨೫ ರಾತ್ರಿ ಮತ್ತೆ ಅವರಿಗೆ ಇಸಿಜಿ ಮಾಡಿಸಿದಾಗ ವರದಿಯಲ್ಲಿ ಕೆಲವು ವ್ಯತ್ಯಾಸಗಳು ಕಂಡು ಬಂದವು. ಅಲ್ಲದೆ ಅವರಿಗೆ ಬೆನ್ನು, ಎದೆ, ತಲೆ ನೋವು ಜಾಸ್ತಿಯಾಗಿ, ಮತ್ತೆ ಇಸಿಜಿ ಮಾಡಿಸಿದ್ದೇವು ಎಂದು ತಿಳಿಸಿದರು.

ಅವರ ಹೃದಯದಲ್ಲಿ ಶೇ. 99% ಬ್ಲಾಕೇಜ್ ಇದ್ದವು ಹಾಗೂ ಇಸಿಜಿಯಲ್ಲಿ ಬಹಳ ವ್ಯತ್ಯಾಸ ಕಂಡುಬಂದದ್ದರಿಂದ ತಕ್ಷಣ ಜನ್ಯಾ ಅವರಿಗೆ ಆಂಜಿಯೋಪ್ಲ್ಯಾಸ್ಟಿ ಹಾಗೂ ಆಂಜಿಯೋಗ್ರಾಂ ಚಿಕಿತ್ಸೆ ನೀಡಲಾಗಿದ್ದು, ಅವರು ಈ ಎರಡೂ ಚಿಕಿತ್ಸೆಗೆ ಸ್ಪಂದಿಸಿದ್ದಾರೆ ಎನ್ನಲಾಗಿದೆ.

ಸದ್ಯ ಅವರನ್ನು ವಾರ್ಡ್ ಗೆ ಶಿಫ್ಟ್ ಮಾಡಿದ್ದು, ಕ್ಷೇಮವಾಗಿದ್ದಾರೆ ಎಂದು ತಿಳಿದುಬಂದಿದೆ.