ಕದ್ರಿ ದೇವಸ್ಥಾನಕ್ಕೆ ಬೈಕ್ ನೊಂದಿಗೆ ನುಗ್ಗಿದ ಮುಸ್ಲಿಂ ಯುವಕರು..

ಮಂಗಳೂರಿನ ಪ್ರಸಿದ್ಧ ದೇವಸ್ಥಾನ ಕದ್ರಿ ದೇವಾಲಯಕ್ಕೆ ಅಪರಿಚಿತ ಯುವಕರು ಬೈಕ್ ನೊಂದಿಗೆ ನುಗ್ಗಿರುವ ಘಟನೆಯೊಂದು ನಡೆದಿದೆ. ಈ ಮೂವರು ಯುವಕರನ್ನು ಸ್ಥಳೀಯರು ವಶಕ್ಕೆ ಪಡೆದು, ಪೊಲೀಸರಿಗೆ ಒಪ್ಪಿಸಿದ್ದಾರೆ.

ವಶಕ್ಕೆ ಪಡೆದವರನ್ನು ಅಸೈಗೋಳಿ ನಿವಾಸಿಗಳಾದ ಹಸನ್ ಶಾಹಿನ್, ಜಾಫರ್, ಫಾರೂಕ್ ಎಂದು ಗುರುತಿಸಲಾಗಿದ್ದು, ಕದ್ರಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸ್ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ, ಕದ್ರಿ ಠಾಣೆಯಲ್ಲಿ ವಶಕ್ಕೆ ಪಡೆದಿರುವವರ ಕುರಿತು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಇದಕ್ಕೂ ಮೊದಲು ಶಂಕಿತ ಉಗ್ರ ಶಾರಿಕ್ ಕದ್ರಿ ದೇಗುಲ ಟಾರ್ಗೆಟ್ ಮಾಡಿದ್ದ. ಬಾಂಬ್ ಸ್ಫೋಟಕ್ಕೆ ಸಂಚು ರೂಪಿಸಿದ್ದ. ಹಾಗಾಗಿ ಪೊಲೀಸರು ಕೂಡಾ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ.