ಕಿದಿಯೂರು ನಾಗ ಸನ್ನಿಧಿಯಲ್ಲಿ ನಾಗರಪಂಚಮಿ ಆಚರಣೆ

ಉಡುಪಿ: ಕಿದಿಯೂರು ಹೋಟೆಲಿನ ಕಾರ್ಣಿಕ ಕೇತ್ರ ನಾಗ ಸನ್ನಿಧಿಯಲ್ಲಿ ನಾಗರಪಂಚಮಿ ಪೂಜೆಯನ್ನು ಮಾಡಲಾಯಿತು. ಕಬಿಯಾಡಿ ಜಯರಾಂ ಆಚಾರ್ಯ ಮಾರ್ಗದರ್ಶನದಲ್ಲಿ ಧಾರ್ಮಿಕ ಪೂಜಾ ವಿಧಾನಗಳಾದ ಕ್ಷೀರಾಭಿಷೇಕ ಹಾಗೂ ಗೆಂದಾಳಿ ಬೊಂಡಾಭಿಷೇಕ ನಡೆಸಲಾಯಿತು. ವಿಶೇಷ ಹೂವಿನ ಅಲಂಕಾರ, ಮಹಾ ಪೂಜೆ ನೆರವೇರಿಸಲಾಯಿತು.

ಹೋಟೆಲ್ ಮಾಲೀಕ ಭುವನೇಂದ್ರ ಕಿದಿಯೂರು, ಶ್ರೀಮತಿ ಹೀರಾ ಬಿ ಕಿದಿಯೂರು, ಜಿತೇಶ್ ಕಿದಿಯೂರು, ಭವ್ಯಶ್ರೀ ಕಿದಿಯೂರು, ವಿಲಾಸ ಕುಮಾರ್, ಹಾಗೂ ಕ್ಷೇತ್ರದ ಭಕ್ತರು ಉಪಸ್ಥಿತರಿದ್ದರು.