ಮಾ.20- 29ರ ವರೆಗೆ ‘ರಾಷ್ಟ್ರೀಯ ರಂಗಹಬ್ಬ’ ಬಹುಭಾಷಾ ನಾಟಕೋತ್ಸವ

ಉಡುಪಿ: ಸುಮನಸಾ ಕೊಡವೂರು ವತಿಯಿಂದ 20ರ ಸಂಭ್ರಮದ ಪ್ರಯುಕ್ತ ರಾಷ್ಟ್ರೀಯ ರಂಗಹಬ್ಬ -10 ಬಹುಭಾಷಾ ನಾಟಕೋತ್ಸವವನ್ನು ಮಾ.20ರಿಂದ 29ರವರೆಗೆ ಅಜ್ಜರಕಾಡು ಭುಜಂಗಪಾರ್ಕ್ ಬಯಲು ರಂಗ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.

ಮಾ.20ರಂದು ಸಂಜೆ 6.30ಕ್ಕೆ ಸಾಹಿತಿ ಮತ್ತು ನಾಟಕಕಾರ ಡಾ.ರಾಜಪ್ಪ ದಳವಾಯಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ಮಾ.29ರಂದು ಸಂಜೆ 6.30ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಸುಮಧುರ ಸ್ಮರಣ ಸಂಚಿಕೆ ಬಿಡುಗಡೆಗೊಳ್ಳಲಿದೆ. ಅಧ್ಯಕ್ಷತೆಯನ್ನು ಸಚಿವ ಸುನೀಲ್ ಕುಮಾರ್ ವಹಿಸಲಿದ್ದಾರೆ. ಪ್ರತಿದಿನ ಸಾಧಕರೊಬ್ಬರಿಗೆ ರಂಗ ಸಾಧಕ ಸನ್ಮಾನ ನೀಡಲಾಗುವುದು ಎಂದು ಸಂಸ್ಥೆಯ ಗೌರವಾಧ್ಯಕ್ಷ ಎಂ.ಎಸ್.ಭಟ್ ಗುರುವಾರ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಮಾ.20ರಂದು 29ರ ವರೆಗೆ ಪ್ರತಿದಿನ ಸಂಜೆ ವಿವಿಧ ಭಾಷೆಯ ನಾಟಕ ಪ್ರದರ್ಶನಗೊಳ್ಳಲಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಅಧ್ಯಕ್ಷ ಪ್ರಕಾಶ್ ಕೊಡವೂರು, ಸಂಚಾಲಕ ಭಾಸ್ಕರ್ ಪಾಲನ್, ಉಪಾಧ್ಯಕ್ಷರಾದ ವಿನಯ್ ಕುಮಾರ್ ಕಲ್ಮಾಡಿ, ಕೋಶಾಧಿಕಾರಿ ಚಂದ್ರಕಾಂತ್ ಕುಂದರ್, ಜೊತೆ ಕಾರ್ಯದರ್ಶಿ ಪ್ರಜ್ಞಾ ಅಮೀನ್ ಉಪಸ್ಥಿತರಿದ್ದರು