ನೀಲಾವರ ಶ್ರೀ ಮಹಿಷಮರ್ದಿನೀ ದೇವಸ್ಥಾನ: ಇಂದು‌ ಸಂಜೆ ಶರನ್ನವರಾತ್ರಿ ಮಹೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನಾ ಸಮಾರಂಭ

ನೀಲಾವರ ಶ್ರೀ ಮಹಿಷಮರ್ದಿನೀ ದೇವಸ್ಥಾನದಲ್ಲಿ ಸೆ.26 ರಿಂದ ಅ.05 ವರೆಗೆ ನಡೆಯುವ ಶರನ್ನವರಾತ್ರಿ ಮಹೋತ್ಸವ ಸಾಂಸ್ಕೃತಿಕ ಕಾರ್ಯಕ್ರದ ಉದ್ಘಾಟನಾ ಸಮಾರಂಭವು ಸೆ.26 ಸೋಮವಾರ ಸಂಜೆ: 6.30ಕ್ಕೆ, ಸ್ಥಳ ಗಾಲವ ಮಂಟಪ, ಶ್ರೀ ಮಹಿಷಮರ್ದಿನೀ ದೇವಸ್ಥಾನ, ನೀಲಾವರದಲ್ಲಿ ನಡೆಯಲಿದೆ.

ಉಡುಪಿ ಶಾಸಕರಾದ ಕೆ. ರಘುಪತಿ ಭಟ್ ಕಾರ್ಯಕ್ರಮವನ್ನು ಉದ್ಘಾಟಿಸುವರು. ಶ್ರೀ ಮಹಿಷಮರ್ದಿನೀ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ರಘುರಾಮ ಮಧ್ಯಸ್ಥ ಅಧ್ಯಕ್ಷತೆಯನ್ನು ವಹಿಸುವರು.

ಮುಖ್ಯ ಅತಿಥಿಗಳಾಗಿ ನೀಲಾವರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಮಹೇಂದ್ರ ಕುಮಾರ್, ಕನ್ನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅಧ್ಯಕ್ಷರಾದ ಶ್ರೀ ಧನಂಜಯ ಅಮೀನ್ ಪೇತ್ರಿ  ಆರೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀ ರತ್ನಾಕರ ಭಟ್ ಆರೂರು ಆರೂರು ಉಪಸ್ಥಿತರಿವರು ಎಂದು ಪ್ರಕಟಣೆ ತಿಳಿಸಿದೆ.