ಬೈಂದೂರು: ಡಾ.ಗೋವಿಂದ ಬಾಬು ಪೂಜಾರಿಯವರ ಜನ್ಮದಿನದ ಅಂಗವಾಗಿ ಮನೆ ಹಸ್ತಾಂತರ

ಬೈಂದೂರು: ಅಸಹಾಯಕ ಮನಗಳಿಗೆ ಆತ್ಮವಿಶ್ವಾಸ ತುಂಬುವ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಉಪ್ಪುಂದ, ಶೆಫ್ ಟಾಕ್ ಫುಡ್ ಆಂಡ್ ಹಾಸ್ಪಿಟಾಲಿಟಿ ಸರ್ವಿಸಸ್ ಪ್ರೈ ಲಿಮಿಟೆಡ್ ಸಂಸ್ಥೆಯನ್ನು ಸ್ಥಾಪಿಸಿ, ಸಾವಿರಕ್ಕೂ ಹೆಚ್ಚಿನ ಜನರಿಗೆ ಉದ್ಯೋಗವನ್ನು ಕಲ್ಪಿಸಿ, ನಿರುದ್ಯೋಗಿಗಳನ್ನು ಸ್ವಾವಲಂಬಿಗಳಾಗಿಸಿ, ಹಲವಾರು ಪ್ರತಿಭೆಗಳ ಬೆನ್ನು ತಟ್ಟಿ ಪ್ರೋತ್ಸಾಹಿಸುವ ಸಮಾಜರತ್ನ ಡಾ.ಗೋವಿಂದ ಬಾಬು ಪೂಜಾರಿ ಒಡೆತನದ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಉಪ್ಪುಂದ ಇವರ ವತಿಯಿಂದ ಈಗಾಗಲೇ 7 ಸುಸಜ್ಜಿತ ಮನೆಗಳನ್ನು ನಿರ್ಮಿಸಿಕೊಟ್ಟಿದ್ದು, ಇದೀಗ 8 ನೇ ಮನೆಯ ಗೃಹಪ್ರವೇಶ ಕಾರ್ಯಕ್ರಮವನ್ನು ಜೂನ್ 26 ರಂದು ಮಧ್ಯಾಹ್ನ 3.30 ಗಂಟೆಗೆ ಉಪ್ಪುಂದ ಶಾಲೆಬಾಗಿಲು ಬಳಿ ನೆರವೇರಿಸಲಾಯಿತು.

ಬೈಂದೂರು ಕ್ಷೇತ್ರದ ಮಾಜಿ ಶಾಸಕ ಬಿ.ಅಪ್ಪಣ್ಣ ಹೆಗ್ಡೆ ಮತ್ತು ಆರ್‌.ಎಸ್.ಎಸ್ ನ ಉಡುಪಿ ಜಿಲ್ಲಾ ಸಂಘಚಾಲಕ ಡಾ.ನಾರಾಯಣ ಶೆಣೈ ಉಪಸ್ಥಿತರಿದ್ದರು.

ಭಾನುವಾರ ಸೇವಾರತ್ನ ಡಾ.ಗೋವಿಂದ ಬಾಬು ಪೂಜಾರಿಯವರ ಜನ್ಮದಿನವಾಗಿದ್ದು, ಇದರ ಅಂಗವಾಗಿ ಮನೆ ಹಸ್ತಾಂತರ ಕಾರ್ಯಕಮವನ್ನು ಆಯೋಜಿಸಲಾಯಿತು.