ಕಡಿಯಾಳಿ ಶ್ರೀ ಮಹಿಷ ಮರ್ದಿನಿ ದೇವಸ್ಥಾನ: ನೂತನ ಶರ್ವಾಣಿ ಮಂಟಪ, ಯಾಗ ಶಾಲೆ ಲೋಕಾರ್ಪಣೆ

ಕಡಿಯಾಳಿ: ಶ್ರೀ ಮಹಿಷ ಮರ್ದಿನಿ ದೇವಸ್ಥಾನದ ನೂತನ ಶರ್ವಾಣಿ ಮಂಟಪ ಮತ್ತು ಯಾಗ ಶಾಲೆಯು ಸೆಪ್ಟೆಂಬರ್ 26 ರಂದು ಸಂಜೆ 5:30 ಗಂಟೆಗೆ ಲೋಕಾರ್ಪಣೆಗೊಳ್ಳಲಿದೆ. ಈ ಸಂದರ್ಭದಲ್ಲಿ ಸೋದೆ ಮಠಾಧೀಶರಾದ ವಿಶ್ವವಲ್ಲಭ ಶ್ರೀಪಾದರು ಉಪಸ್ಥಿತರಿದ್ದು, ಆಶೀರ್ವಚನ ನೀಡಲಿದ್ದಾರೆ. ನೂತನ ಶರ್ವಾಣಿ ಮಂಟಪವನ್ನು ಉಡುಪಿ ಶಾಸಕ ಕೆ‌. ರಘುಪತಿ ಭಟ್ ಉದ್ಘಾಟಿಸಲಿದ್ದಾರೆ.

ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ನಾಗೇಶ್ ಹೆಗ್ಡೆ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಪುರುಷೋತ್ತಮ ಶೆಟ್ಟಿ, ಕರಾವಳಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ನಗರಸಭಾ ಅಧ್ಯಕ್ಷೆ ಸುಮಿತ್ರಾ ನಾಯಕ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ ಕಲ್ಮಾಡಿ, ಸ್ಥಳೀಯ ನಗರಸಭೆ ಸದಸ್ಯೆ ಗೀತಾ ಶೇಟ್ ಉಪಸ್ಥಿತರಿರಲಿದ್ದಾರೆ ಎಂದು ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಡಾ.ಕಟ್ಟೆ ರವಿರಾಜ ವಿ. ಆಚಾರ್ಯ ತಿಳಿಸಿದ್ದಾರೆ.