ರಾಜ್ಯದಲ್ಲಿ ಇಂದಿನಿಂದ ನೈಟ್ ಕರ್ಫ್ಯೂ ಜಾರಿ: ಸಿಎಂ

ಬೆಂಗಳೂರು: ರೂಪಾಂತರಗೊಂಡಿರುವ ಕೊರೊನಾ ಸೋಂಕಿನ ಆತಂಕದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂದಿನಿಂದ (ಡಿ.23) ಜನವರಿ 2ರವರೆಗೆ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ.

ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6ಗಂಟೆಯವರೆಗೆ ಕರ್ಫ್ಯೂ ಜಾರಿಯಲ್ಲಿರುತ್ತದೆ. ಇಂದು ರಾತ್ರಿಯಿಂದಲೇ ಈ ಕ್ರಮ ಜಾರಿಗೆ ಬರಲಿದೆ. ಇಡೀ ರಾಜ್ಯಕ್ಕೆ ಈ ಆದೇಶ ಅನ್ವಯವಾಗಲಿದೆ ಎಂದರು.