ನೀಲಾವರ ಶ್ರೀ ಮಹಿಷಮರ್ದಿನೀ ದೇವಸ್ಥಾನ: ಬ್ರಹ್ಮಕಲಶೋತ್ಸವಕ್ಕೆ ಚಪ್ಪರ ಮುಹೂರ್ತ, ಆಮಂತ್ರಣ ಪತ್ರಿಕೆ ಬಿಡುಗಡೆ

ಬ್ರಹ್ಮಾವರ: ನೀಲಾವರ ಶ್ರೀ ಮಹಿಷಮರ್ದಿನೀ ದೇವಸ್ಥಾನದಲ್ಲಿ ಮಾ.25 ರಿಂದ ಎ.1ರ ವರೆಗೆ ನಡೆಯುವ ನವೀಕೃತ ಗರ್ಭಗುಡಿ ಮತ್ತು ನೂತನ ಶಿಲಾಮಯ ತೀರ್ಥ ಮಂಟಪ ಸಮರ್ಪಣೆ ಹಾಗೂ ಬ್ರಹ್ಮಕಲಶೋತ್ಸವದ ಪ್ರಯುಕ್ತ ಚಪ್ಪರ ಮುಹೂರ್ತ ಹಾಗೂ ಆಮಂತ್ರಣ ಪತ್ರಿಕೆಯನ್ನು ಶ್ರೀಕ್ಷೇತ್ರ ಆನೆಗುಡ್ಡೆ ಸಿದ್ದಿವಿನಾಯಕ ದೇವಳದ ಧರ್ಮದರ್ಶಿ ಕೆ. ಸೂರ್ಯನಾರಾಯಣ ಉಪಾಧ್ಯಾಯರು ಬಿಡುಗಡೆಗೊಳಿಸಿದರು.
ನೀಲಾವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎನ್. ರಘುರಾಮ್ ಮಧ್ಯಸ್ಥ, ತಾಲೂಕು ಪಂಚಾಯತ್ ಸದಸ್ಯೆ ನಳಿನಿ ಪ್ರದೀಪ್ ರಾವ್, ನೀಲಾವರ ಗ್ರಾಮ ಪಂಚಾಯತ್ ಅಧ್ಯಕ್ಷೆ ಆಶಾ ಎಸ್. ಕೋಟ್ಯಾನ್, ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಸುಧೀರ್ ಕುಮಾರ್ ಶೆಟ್ಟಿ, ರಮೇಶ್ ಪೂಜಾರಿ, ಹೇಮಾವತಿ ವಿ. ಬಾಸ್ರಿ, ಸದಾಶಿವ ದೇವಾಡಿಗ, ಮಲ್ಲಿಕಾ ಎಸ್. ಶೆಟ್ಟಿ, ರಮೇಶ್ ನಾಯ್ಕ್, ಸುರೇಂದ್ರ ಸುವರ್ಣ, ಅರ್ಚಕರಾದ ಎನ್. ಚಂದ್ರಶೇಖರ ಅಡಿಗ, ಎನ್. ಕೃಷ್ಣ ಅಡಿಗ, ಎನ್. ರಾಘವೇಂದ್ರ ಅಡಿಗ, ಅರ್ಚಕ ವೃಂದ, ಸಿಬ್ಬಂದಿ, ಉಪಾಧಿವಂತರು, ಗ್ರಾಮಸ್ಥರು, ಭಕ್ತಾದಿಗಳು ಉಪಸ್ಥಿತರಿದ್ದರು.