ಮುಂಬೈ-ರಾಯಚೂರು ರೈಲಿನಲ್ಲಿ ಸಹಪ್ರಯಾಣಿಕರೊಂದಿಗೆ ಸಂವಾದ ನಡೆಸಿದ ನಿರ್ಮಲಾ ಸೀತಾರಾಮನ್

ದೇಶದ ವಿತ್ತ ಸಚಿವೆಯಾಗಿರುವ ಶ್ರೀಮತಿ ನಿರ್ಮಲಾ ಸೀತಾರಾಮನ್ ಸಾಮಾನ್ಯರಂತೆಯೆ ರೈಲಿನಲ್ಲಿ ಪ್ರಯಾಣಿಸಿದ್ದು, ಮುಂಬೈನಿಂದ ರಾಯಚೂರಿಗೆ ತನ್ನ ರೈಲು ಪ್ರಯಾಣದ ಸಮಯದಲ್ಲಿ ಹಮ್ಮು-ಬಿಮ್ಮುಗಳಿಲ್ಲದೆ ಸಹ-ಪ್ರಯಾಣಿಕರೊಂದಿಗೆ ಸಂವಹನ ನಡೆಸುತ್ತಿರುವುದು ನೆಟ್ಟಿಗರ ಮೆಚ್ಚುಗೆಗೆ ಪಾತ್ರವಾಗಿದೆ.

ಈ ಚಿತ್ರಗಳನ್ನು ನಿರ್ಮಲಾ ಸೀತಾರಾಮನ್ ಅವರ ಕಚೇರಿಯು ಟ್ವಿಟರ್ ನಲ್ಲಿ ಹಂಚಿಕೊಂಡಿದೆ.