ನಿಟ್ಟೆ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ನಿಟ್ಟೆ: ಜುಲೈ 12 ರಂದು ನಿಟ್ಟೆ ರೋಟರಿ ಕ್ಲಬ್ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ನಿಟ್ಟೆ ಕಾಲೇಜಿನ ಸಂಭ್ರಮ ಸಭಾಂಗಣದಲ್ಲಿ ನೆರವೇರಿತು. 2023-24 ನೇ ಸಾಲಿನ ಪದಗ್ರಹಣ ಅಧಿಕಾರಿಯಾಗಿ ರೋಟರಿ ಜಿಲ್ಲೆ 3182 ನ ಗವರ್ನರ್ ಬಿ.ಸಿ. ಗೀತಾರವರು ಪದಗ್ರಹಣವನ್ನು ನೆರವೇರಿಸಿ ನೂತನ ಪದಾಧಿಕಾರಿಗಳಿಗೆ ಶುಭಹಾರೈಸಿದರು. ನೂತನ ಅಧ್ಯಕ್ಷ ರೋ.ಡಾ.ಸುದೀಪ ಕೆ.ಬಿ, ಕಾರ್ಯದರ್ಶಿ ರೋ.ಡಾ.ಕೃಷ್ಣ ಪ್ರಸಾದ್ ಮತ್ತು ತಂಡದವರು ಅಧಿಕಾರ ಸ್ವೀಕರಿಸಿದರು.

ನೂತನ ಅಧ್ಯಕ್ಷ ರೋ.ಡಾ.ಸುದೀಪ ಕೆ.ಬಿ ಮಾತನಾಡಿ, ಮುಂದಿನ ಜನಾಂಗಕ್ಕೆ ಶುದ್ದ ಗಾಳಿ, ನೀರು, ನೆಲದ ಪ್ರಕೃತಿಯನ್ನು ಕೊಡುಗೆಯಾಗಿ ನೀಡಲು ಸಹಕರಿಸುವಂತೆ ಕ್ಲಬ್ ನ ಸದಸ್ಯರಲ್ಲಿ ಕೋರಿದರು.

ನಿಕಟಪೂರ್ವ ಅಧ್ಯಕ್ಷ ರೋ.ಗೋಪಾಲಕೃಷ್ಣ ಅವರು ಕಳೆದ ಬಾರಿಯ ಯೋಜನೆಗಳನ್ನು ಸಾಕಾರಗೊಳಿಸಲು ಸಹಕರಿಸಿದವರನ್ನು ಸ್ಮರಿಸಿದರು.

ಇದೇ ಸಂದರ್ಭದಲ್ಲಿ ಡಾ.ಎನ್.ಎಸ್.ಎ.ಎಂ ಪಿ.ಯು ಕಾಲೇಜಿನ ವಿದ್ಯಾರ್ಥಿನಿ ಸ್ಮಿಶಾ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ 10 ನೇ ಸ್ಥಾನ ಪಡೆದಿರುವ ಹಿನ್ನಲೆಯಲ್ಲಿ ಅವರನ್ನು ಸನ್ಮಾನಿಸಲಾಯಿತು. ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ ಕೊಡೆ ಹಾಗೂ ಪುಸ್ತಕ ವಿತರಣಾ ಯೋಜನೆಗೆ ಚಾಲನೆ ನೀಡಲಾಯಿತು.  ಜೀವನೋಪಾಯಕ್ಕಾಗಿ  ಮಹಿಳೆಯೋರ್ವರಿಗೆ ಹೊಲಿಗೆ ಯಂತ್ರ ವಿತರಣೆ ನಡೆಯಿತು.

ಈ ಸಂದರ್ಭದಲ್ಲಿ ನಿಟ್ಟೆ ರೋಟರಿ ಕ್ಲಬ್ ಗೆ ಮೂರು ಹೊಸ ಸದಸ್ಯರು ಸೇರ್ಪಡೆಗೊಂಡರು.

ಸಹಾಯಕ ಗವರ್ನರ್ ರೋ.ಡಾ.ಶಶಿಕಾಂತ್ ಕರಿಂಕ  ಗೃಹಪತ್ರಿಕೆ ನಿರೂಪವನ್ನು ಬಿಡುಗಡೆಗೊಳಿಸಿ ಜಿಲ್ಲಾ ಯೋಜನೆಗಳನ್ನು ಸಭೆಯ ಮುಂದಿರಿಸಿದರು. ವಲಯ ಸೇನಾನಿ ರೋ.ಸುವರ್ಣ ನಾಯಕ್  ನೂತನ ತಂಡಕ್ಕೆ ಶುಭ ಹಾರೈಸಿದರು.