ಉಡುಪಿ: ಮೀನುಗಾರಿಕೆ ಇಲಾಖೆಯ ವತಿಯಿಂದ ಮೀನುಗಾರರ ಸಂಕಷ್ಟ ಪರಿಹಾರ ನಿಧಿಗೆ ಅನುದಾನ ಸಂಗ್ರಹಿಸಲು ಸರ್ಕಾರವು ಯಾಂತ್ರೀಕೃತ ಮೀನುಗಾರಿಕೆ ದೋಣಿಗಳಿಗೆ ನಿಗದಿಪಡಿಸುವ ರಾಜ್ಯ ಮಾರಾಟಕರ ದರದ ಶೇ. 1.5 ರ ಮೊತ್ತವನ್ನು ಡೀಸೆಲ್ ವಿತರಣೆ ಮಾಡುವ ಸಮಯದಲ್ಲಿ ಪ್ರತಿ ದೋಣಿಗೆ ನಿಗದಿಪಡಿಸಿರುವ ಡೀಸೆಲ್ ಪ್ರಮಾಣಕ್ಕನುಗುಣವಾಗಿ ಮೀನುಗಾರಿಕೆ ದೋಣಿ ಮಾಲೀಕರಿಂದ ಮೀನುಗಾರರ ಸಂಕಷ್ಟ ಪರಿಹಾರ ನಿಧಿಯ ಶುಲ್ಕದ ವಸೂಲಾತಿಯನ್ನು ತಕ್ಷಣ ಪ್ರಾರಂಭಿಸಿ, ಆ ಮೊತ್ತವನ್ನು ಡೀಸೆಲ್ ಬಂಕ್ ಮಾಲಿಕರು ಮೀನುಗಾರರ ಸಂಕಷ್ಟ ಪರಿಹಾರ ನಿಧಿಗಾಗಿ ಮೀನುಗಾರಿಕೆ ನಿರ್ದೇಶಕರು, ಬೆಂಗಳೂರು ಹೆಸರಿನ ಬ್ಯಾಂಕ್ ಖಾತೆಗೆ ಜಮಾ ಮಾಡುವಂತೆ ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












