ಶಿವಮೊಗ್ಗ: ರಾಜ್ಯಾದ್ಯಂತ 13 ಸಾವಿರ ಶಿಕ್ಷಕರ ನೇಮಕಾತಿಗೆ ಸರಕಾರ ನಿರ್ಧರಿಸಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ.
ಸೋಮವಾರ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಧಿಸೂಚನೆ ಹೊರಡಿಸಲಾಗಿದೆ. ಅಕ್ಟೋಬರ್ 23 ರಿಂದ ನವೆಂಬರ್ 9 ರವರೆಗೆ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಡಿಸೆಂಬರ್ 7ರಂದು ಟಿಇಟಿ ಪರೀಕ್ಷೆ ನಡೆಸಿ, ಡಿಸೆಂಬರ್ 31ರಂದು ಫಲಿತಾಂಶ ಪ್ರಕಟಿಸಲು ನಿರ್ಧರಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.


















